25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ತೆoಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮಾಚರಣೆಯಿಂದ ಆಚರಿಸಲಾಯಿತು. ಸಲಹಾ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ವಿಶ್ವನಾಥ ಹೊಳ್ಳ ಬಳಂಜ, ಎಂ.ಸಿ. ನಾರಾಯಣ ಗೌಡ, ನಾರಾಯಣ ರಾವ್ ಕಾಪಿನಡ್ಕ, ಅಬ್ದುಲ್ ಖಾದರ್ ಕರಂಬಾರು, ಗ್ರಾಮ ಪಂಚಾಯತ್ ಸದಸ್ಯೆ ಪದ್ಮಾವತಿ, ಚಂದ್ರ ಪೂಜಾರಿ ಗೌ. ಅಧ್ಯಕ್ಷರು ಸ. ಸಮಿತಿ, ಕೊರಗಪ್ಪ ನಾಯ್ಕ ಗಿಳಿಕಾಪು, ಸುಂದರ ಲಿಂಗಾಯತ, ಗುಲಾಬಿ ಎಂ.ಎನ್, ಉಪಸ್ಥಿತರಿದ್ದರು.

ಮುಖ್ಯ ಅತಿಥಿ ಕಿಶೋರ್ ಹೆಗ್ಡೆ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಂ.ಸಿ. ನಾರಾಯಣ ಗೌಡ, ಶ್ರೀಯುತ ವಿಶ್ವನಾಥ ಹೊಳ್ಳ ಬಳಂಜ, ನಾರಾಯಣ ರಾವ್ ಕಾಪಿನಡ್ಕ, ಕೊರಗಪ್ಪ ನಾಯ್ಕ ಗಿಳಿಕಾಪು ಇವರುಗಳು ಅಂಗನವಾಡಿ ಗೆ ನೀಡಿದ ಸೇವೆಯನ್ನು ಸ್ಮರಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ತಾಯಂದಿರು, ಊರವರು, ಸ್ತ್ರೀ ಶಕ್ತಿ ತಂಡದ ಸದಸ್ಯರು, ಸ್ವಸಹಾಯ ತಂಡದ ಸದಸ್ಯರು, ಸಂಜೀವಿನಿ ತಂಡದ ಸದಸ್ಯರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 1ನೇ ತರಗತಿಗೆ ಸೇರಿದ ಮಕ್ಕಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿ ನೆನಪಿನ ಕಾಣಿಕೆ ನೀಡಲಾಯಿತು. ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಪುಟಾಣಿ ಮಕ್ಕಳು ಪ್ರಾರ್ಥಿಸಿದರು. ಅಂಜನಿ ಎಂ. ರಾವ್ ಸ್ವಾಗತಿಸಿ, ಮನಿತಾ ಸಿ. ಶೆಟ್ಟಿ ನಿರೂಪಿಸಿ, ವಂದಿಸಿದರು. ಶ್ರಿಮತಿ ಸುನಂದ ಸಹಕರಿಸಿದರು.

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya
error: Content is protected !!