25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪುರುಷರ ಕಬ್ಬಡಿ ಪಂದ್ಯಾಟವು ಅಜ್ಜರಕಾಡ್ ಸ್ಟೇಡಿಯಂ ಉಡುಪಿಯಲ್ಲಿ ದಿ. 4 ರಂದು ನಡೆಯಿತು. ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರು ವಿಭಾಗದ ಕಬ್ಬಡಿ ಪಂದ್ಯಾಟದಲ್ಲಿ ಚಾಂಪಿಯನ್ ಶಿಪ್ ಪಟ್ಟವನ್ನು ಅಲಂಕರಿಸಿದೆ.


ಈ ತಂಡದ ನಾಲ್ಕು ಆಟಗಾರರಾದ ಸುಶಾಂತ್ ಶೆಟ್ಟಿ , ಶಶಾಂಕ್ ಆಚಾರ್ಯ, ಮಹಮ್ಮದ್ ಆಫ್ರಿದ್, ಪ್ರಜ್ವಲ್ ಇವರು ಮಂಗಳೂರು ವಿಶ್ವವಿದ್ಯಾನಿಲಯದ ದಕ್ಷಿಣ ವಿಭಾಗ ಮಟ್ಟ ಹಾಗೂ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯದಲ್ಲಿ ಚಿನ್ನದ ಪದಕ ಪಡೆದು ಖೇಲೋ ಇಂಡಿಯಾ ಗೆ ಮಂಗಳೂರು ವಿಶ್ವವಿದ್ಯಾನಿಲಯದ ತಂಡದ ಮೂಲಕ ಆಯ್ಕೆಯಾಗಿರುತ್ತಾರೆ.


ಸುಶಾಂತ ಶೆಟ್ಟಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡದ ನಾಯಕ ಹಾಗೂ ಉಜಿರೆ ಕಬಡ್ಡಿ ತಂಡದ ನಾಯಕರಾಗಿದ್ದಾರೆ. ಈ ಪಂದ್ಯಾಟದಲ್ಲಿ ಸುಶಾಂತ್ ಶೆಟ್ಟಿ ಉತ್ತಮ ಹಿಡಿತಗಾರ, ಹಾಗೂ ಪ್ರಜ್ವಲ್ ಉತ್ತಮ ದಾಳಿಗಾರ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಎಸ್ ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯ ಹರ್ಷೇಂದ್ರ ಕುಮಾರ್ ಮತ್ತು ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾದ ಬಿ. ಎ ಕುಮಾರ್ ಹೆಗ್ಡೆ ಇವರು ಕ್ರೀಡಾಪಟುಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು. ಎಸ್‌ಡಿಎಂ ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್ ಹೆಚ್ ತಂಡವನ್ನು ಪ್ರೋತ್ಸಾಹಿಸಿದರು.
ಇವರಿಗೆ ಕೃಷ್ಣಾನಂದ ರಾವ್ ತರಬೇತಿಯನ್ನು ನೀಡಿರುತ್ತಾರೆ. ಹಾಗೂ ಸುಧೀನ ಪೂಜಾರಿ, ಸಂದೇಶ್ ಪೂoಜ, ಶಾರದಾ ಇವರು ಸಹಕರಿಸಿದ್ದಾರೆ.

Related posts

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!