38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಡಿರುದ್ಯಾವರ: ಶಿಕ್ಷಣ, ಸಾಹಿತ್ಯ, ಕಲೆ ಮತ್ತು ಹರಿಕಥಾ ಕ್ಷೇತ್ರದಲ್ಲಿ ಸ್ವ ಪರಿಶ್ರಮದ ಮೂಲಕ ಐದು ದಶಕಗಳಿಗೂ ಹೆಚ್ಚುಕಾಲ ಸೇವೆಗೈದು 1997ರಲ್ಲಿ ಗತರಾಗಿರುವ ದಿ. ಕೆ.ಎನ್. ಭಟ್ ಶಿರಾಡಿಪಾಲರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಯೋಜಿತ ಶತನಮನ ಶತಸನ್ಮಾನ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದೆ.


ಜ. 13, 2024 ಶನಿವಾರದಂದು ಬೆಳ್ರಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಶಿರಾಡಿಪಾಲರ ಕಿನ್ಯಡ್ಕ ಮನೆಯಲ್ಲಿ ಜರಗಲಿರುವ ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಡಿ. 3ರಂದು ಕಡಿರುದ್ಯಾವರ ಗ್ರಾಮದ ಕಿನ್ಯಡ್ಕ ಮನೆಯಲ್ಲಿ ಬಿಡುಗಡೆಗೊಳಿಸಲಾಯಿತು. ಮೈಸೂರಿನ ಲೆಕ್ಕ ಪರಿಶೋಧಕರಾದ ಭಾಸ್ಕರ ರಾವ್-ಜಯಂತಿ ದಂಪತಿಗಳು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ವೇ.ಮೂ. ರಜನೀಶ್ ಫಡ್ಕೆಯವರು ಶ್ರೀ ಸಪ್ತಶತಿ ಪಾರಾಯಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿರಾಡಿಪಾಲರ ಪುತ್ರ ಶಶಿಧರ ಪರಾಂಜಪೆ- ರಮಾ ಪರಾಂಜಪೆ ದಂಪತಿಯ, ಪುತ್ರಿಯರಾದ ಅನುಪಮಾ ಚಿಪ್ಳೂಣಕರ್, ವಿದ್ಯಾಡೋಂಗ್ರೆ, ಮೊಮ್ಮಗ ಶರತ್ ಚಂದ್ರ ಪರಾಂಜಪೆ- ಅಪರ್ಣ ದಂಪತಿಗಳು, ಶತನಮನ ಶತಸನ್ಮಾನ ಕಾರ್ಯಕ್ರಮದ ಸಂಘಟಕ ಕೃಷ್ಣಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

Suddi Udaya
error: Content is protected !!