April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಡಿರುದ್ಯಾವರ: ಶಿಕ್ಷಣ, ಸಾಹಿತ್ಯ, ಕಲೆ ಮತ್ತು ಹರಿಕಥಾ ಕ್ಷೇತ್ರದಲ್ಲಿ ಸ್ವ ಪರಿಶ್ರಮದ ಮೂಲಕ ಐದು ದಶಕಗಳಿಗೂ ಹೆಚ್ಚುಕಾಲ ಸೇವೆಗೈದು 1997ರಲ್ಲಿ ಗತರಾಗಿರುವ ದಿ. ಕೆ.ಎನ್. ಭಟ್ ಶಿರಾಡಿಪಾಲರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಯೋಜಿತ ಶತನಮನ ಶತಸನ್ಮಾನ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದೆ.


ಜ. 13, 2024 ಶನಿವಾರದಂದು ಬೆಳ್ರಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಶಿರಾಡಿಪಾಲರ ಕಿನ್ಯಡ್ಕ ಮನೆಯಲ್ಲಿ ಜರಗಲಿರುವ ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಡಿ. 3ರಂದು ಕಡಿರುದ್ಯಾವರ ಗ್ರಾಮದ ಕಿನ್ಯಡ್ಕ ಮನೆಯಲ್ಲಿ ಬಿಡುಗಡೆಗೊಳಿಸಲಾಯಿತು. ಮೈಸೂರಿನ ಲೆಕ್ಕ ಪರಿಶೋಧಕರಾದ ಭಾಸ್ಕರ ರಾವ್-ಜಯಂತಿ ದಂಪತಿಗಳು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ವೇ.ಮೂ. ರಜನೀಶ್ ಫಡ್ಕೆಯವರು ಶ್ರೀ ಸಪ್ತಶತಿ ಪಾರಾಯಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿರಾಡಿಪಾಲರ ಪುತ್ರ ಶಶಿಧರ ಪರಾಂಜಪೆ- ರಮಾ ಪರಾಂಜಪೆ ದಂಪತಿಯ, ಪುತ್ರಿಯರಾದ ಅನುಪಮಾ ಚಿಪ್ಳೂಣಕರ್, ವಿದ್ಯಾಡೋಂಗ್ರೆ, ಮೊಮ್ಮಗ ಶರತ್ ಚಂದ್ರ ಪರಾಂಜಪೆ- ಅಪರ್ಣ ದಂಪತಿಗಳು, ಶತನಮನ ಶತಸನ್ಮಾನ ಕಾರ್ಯಕ್ರಮದ ಸಂಘಟಕ ಕೃಷ್ಣಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya
error: Content is protected !!