30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಯೋಗೀಶ್ ಮತ್ತು ಆತನ ಮಗ ಜೀವನ್‌ ಎಂಬವರಿಗೆ‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ರೂ 3,00,000/- ದಂಡ , ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಿ ನ್ಯಾಯಾಲಯವು ಆದೇಶಿಸಿದೆ.

2020 ಫೆ 02 ರಂದು ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 13/2020 ಕಲಂ: 504,302, ಜೊತೆಗೆ 34 ಐ.ಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಾದ ಲಾಯಿಲ ಗ್ರಾಮದ ನಿವಾಸಿ ಯೋಗೀಶ್ (51) ಮತ್ತು ಆತನ ಮಗ ಜೀವನ್‌ ಎಂಬವರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಕೆಯಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಡಿ.06 ರಂದು ಅಪರಾಧಿ ಯೋಗೀಶನಿಗೆ ಕಲಂ: 302 ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ರೂ. 3 ಲಕ್ಷ ದಂಡ ವಿಧಿಸಿ ಆದೇಶ ಮಾಡಿದ್ದು, ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಲಾಗಿರುತ್ತದೆ.

ಪ್ರಕರಣದ ತನಿಖಾಧಿಕಾರಿಯಾಗಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಸಂದೇಶ್‌ ಪಿ ಜಿ ರವರು ಹಾಗೂ ತನಿಖಾ ಸಹಾಯಕರಾಗಿ ಎ ಎಸ್‌ ಐ ವೆಂಕಟೇಶ್‌ ರವರು ಕಾರ್ಯನಿರ್ವಹಿಸಿರುತ್ತಾರೆ. ನ್ಯಾಯಾಲಯ ಕರ್ತವ್ಯದಲ್ಲಿ ಪೊಲೀಸ್‌ ಕಾನ್ಸ್‌ ಟೇಬಲ್‌ ಜಗದೀಶ್‌ ರವರು ಸಹಕರಿಸಿರುತ್ತಾರೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರೀಮತಿ ಜ್ಯೋತಿ ಪ್ರಮೋದ ನಾಯಕ್‌ ರವರು ನ್ಯಾಯಾಲಯದಲ್ಲಿ ವಾದಿಸಿರುತ್ತಾರೆ.

Related posts

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya
error: Content is protected !!