25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಯೋಗೀಶ್ ಮತ್ತು ಆತನ ಮಗ ಜೀವನ್‌ ಎಂಬವರಿಗೆ‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ರೂ 3,00,000/- ದಂಡ , ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಿ ನ್ಯಾಯಾಲಯವು ಆದೇಶಿಸಿದೆ.

2020 ಫೆ 02 ರಂದು ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 13/2020 ಕಲಂ: 504,302, ಜೊತೆಗೆ 34 ಐ.ಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಾದ ಲಾಯಿಲ ಗ್ರಾಮದ ನಿವಾಸಿ ಯೋಗೀಶ್ (51) ಮತ್ತು ಆತನ ಮಗ ಜೀವನ್‌ ಎಂಬವರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಕೆಯಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಡಿ.06 ರಂದು ಅಪರಾಧಿ ಯೋಗೀಶನಿಗೆ ಕಲಂ: 302 ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ರೂ. 3 ಲಕ್ಷ ದಂಡ ವಿಧಿಸಿ ಆದೇಶ ಮಾಡಿದ್ದು, ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಲಾಗಿರುತ್ತದೆ.

ಪ್ರಕರಣದ ತನಿಖಾಧಿಕಾರಿಯಾಗಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಸಂದೇಶ್‌ ಪಿ ಜಿ ರವರು ಹಾಗೂ ತನಿಖಾ ಸಹಾಯಕರಾಗಿ ಎ ಎಸ್‌ ಐ ವೆಂಕಟೇಶ್‌ ರವರು ಕಾರ್ಯನಿರ್ವಹಿಸಿರುತ್ತಾರೆ. ನ್ಯಾಯಾಲಯ ಕರ್ತವ್ಯದಲ್ಲಿ ಪೊಲೀಸ್‌ ಕಾನ್ಸ್‌ ಟೇಬಲ್‌ ಜಗದೀಶ್‌ ರವರು ಸಹಕರಿಸಿರುತ್ತಾರೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರೀಮತಿ ಜ್ಯೋತಿ ಪ್ರಮೋದ ನಾಯಕ್‌ ರವರು ನ್ಯಾಯಾಲಯದಲ್ಲಿ ವಾದಿಸಿರುತ್ತಾರೆ.

Related posts

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya
error: Content is protected !!