September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಯೋಗೀಶ್ ಮತ್ತು ಆತನ ಮಗ ಜೀವನ್‌ ಎಂಬವರಿಗೆ‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ರೂ 3,00,000/- ದಂಡ , ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಿ ನ್ಯಾಯಾಲಯವು ಆದೇಶಿಸಿದೆ.

2020 ಫೆ 02 ರಂದು ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 13/2020 ಕಲಂ: 504,302, ಜೊತೆಗೆ 34 ಐ.ಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಾದ ಲಾಯಿಲ ಗ್ರಾಮದ ನಿವಾಸಿ ಯೋಗೀಶ್ (51) ಮತ್ತು ಆತನ ಮಗ ಜೀವನ್‌ ಎಂಬವರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಕೆಯಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಡಿ.06 ರಂದು ಅಪರಾಧಿ ಯೋಗೀಶನಿಗೆ ಕಲಂ: 302 ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ರೂ. 3 ಲಕ್ಷ ದಂಡ ವಿಧಿಸಿ ಆದೇಶ ಮಾಡಿದ್ದು, ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಲಾಗಿರುತ್ತದೆ.

ಪ್ರಕರಣದ ತನಿಖಾಧಿಕಾರಿಯಾಗಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಸಂದೇಶ್‌ ಪಿ ಜಿ ರವರು ಹಾಗೂ ತನಿಖಾ ಸಹಾಯಕರಾಗಿ ಎ ಎಸ್‌ ಐ ವೆಂಕಟೇಶ್‌ ರವರು ಕಾರ್ಯನಿರ್ವಹಿಸಿರುತ್ತಾರೆ. ನ್ಯಾಯಾಲಯ ಕರ್ತವ್ಯದಲ್ಲಿ ಪೊಲೀಸ್‌ ಕಾನ್ಸ್‌ ಟೇಬಲ್‌ ಜಗದೀಶ್‌ ರವರು ಸಹಕರಿಸಿರುತ್ತಾರೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರೀಮತಿ ಜ್ಯೋತಿ ಪ್ರಮೋದ ನಾಯಕ್‌ ರವರು ನ್ಯಾಯಾಲಯದಲ್ಲಿ ವಾದಿಸಿರುತ್ತಾರೆ.

Related posts

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಐದು ದಶಕಗಳ ವಿಶ್ವಾಸ, ಬೆಳ್ತಂಗಡಿ ನಗರದ ಮೊಟ್ಟ ಮೊದಲ ಚಿನ್ನಾಭರಣ ಗೀತಾ ಜ್ಯುವೆಲ್ಲರ್ಸ್‌ ನವೀಕೃತ ಮಳಿಗೆ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
error: Content is protected !!