25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಯೋಗೀಶ್ ಮತ್ತು ಆತನ ಮಗ ಜೀವನ್‌ ಎಂಬವರಿಗೆ‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ರೂ 3,00,000/- ದಂಡ , ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಿ ನ್ಯಾಯಾಲಯವು ಆದೇಶಿಸಿದೆ.

2020 ಫೆ 02 ರಂದು ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 13/2020 ಕಲಂ: 504,302, ಜೊತೆಗೆ 34 ಐ.ಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಾದ ಲಾಯಿಲ ಗ್ರಾಮದ ನಿವಾಸಿ ಯೋಗೀಶ್ (51) ಮತ್ತು ಆತನ ಮಗ ಜೀವನ್‌ ಎಂಬವರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಕೆಯಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಡಿ.06 ರಂದು ಅಪರಾಧಿ ಯೋಗೀಶನಿಗೆ ಕಲಂ: 302 ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ರೂ. 3 ಲಕ್ಷ ದಂಡ ವಿಧಿಸಿ ಆದೇಶ ಮಾಡಿದ್ದು, ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಲಾಗಿರುತ್ತದೆ.

ಪ್ರಕರಣದ ತನಿಖಾಧಿಕಾರಿಯಾಗಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಸಂದೇಶ್‌ ಪಿ ಜಿ ರವರು ಹಾಗೂ ತನಿಖಾ ಸಹಾಯಕರಾಗಿ ಎ ಎಸ್‌ ಐ ವೆಂಕಟೇಶ್‌ ರವರು ಕಾರ್ಯನಿರ್ವಹಿಸಿರುತ್ತಾರೆ. ನ್ಯಾಯಾಲಯ ಕರ್ತವ್ಯದಲ್ಲಿ ಪೊಲೀಸ್‌ ಕಾನ್ಸ್‌ ಟೇಬಲ್‌ ಜಗದೀಶ್‌ ರವರು ಸಹಕರಿಸಿರುತ್ತಾರೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರೀಮತಿ ಜ್ಯೋತಿ ಪ್ರಮೋದ ನಾಯಕ್‌ ರವರು ನ್ಯಾಯಾಲಯದಲ್ಲಿ ವಾದಿಸಿರುತ್ತಾರೆ.

Related posts

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

Suddi Udaya

ಮುಸುಕುಧಾರಿಗಳಿಂದ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಚೂರಿಯಿಂದ ಇರಿದು ಹಲ್ಲೆ : ವಿದ್ಯಾರ್ಥಿನಿ ಆಸ್ಪತ್ರೆಗೆ -ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!