25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

ಬೆಳ್ತಂಗಡಿ: ಲಾಯಿಲದ ಗ್ಯಾರೇಜ್ ಬಳಿ ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಹಾಗೂ ಮಕ್ಕಳ ವಸ್ರ್ತವಿದ್ದ ಬ್ಯಾಗ್ ಕಳವಾದ ಬಗ್ಗೆ ವರದಿಯಾಗಿದೆ.


ಕಕ್ಕಿಂಜೆ ಸನಿಹದ ಚಿಬಿದ್ರೆ ನಿವಾಸಿ ಅಬ್ದುಲ್‌ಜಲೀಲ್ ಅವರ ಕಾರಿನಿಂದ ಈ ಬ್ಯಾಗ್ ಕಳವಾಗಿದೆ.
ಜಲೀಲ್ ಅವರು ಪತ್ನಿ, ನಾಲ್ವರು ಮಕ್ಕಳು ಹಾಗೂ ಸಹೋದರಿ ಜೊತೆ ಪ್ರಯಾಣಿಸುತ್ತಿದ್ದ ವೇಳೆ ಲಾಯಿಲ ಜಂಕ್ಷನ್ ಬಳಿ ಗ್ಯಾರೇಜ್‌ಗೆ ತೆರಳಿದ್ದರು. ಈ ವೇಳೆ ಚಾಣಾಕ್ಷ ಕಳ್ಳರು ಕಾರಿನಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಬಟ್ಟೆ ಇದ್ದ ಬ್ಯಾಗನ್ನು ಎಗರಿಸಿದ್ದಾರೆ.

ಈ ಸಂಬಂಧ ಜಲೀಲ್ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಬ್ಯಾಗಿನಲ್ಲಿ ರೂ 1,500/- ನಗದು ಹಣ, ಮಕ್ಕಳ ಬಟ್ಟೆ ಹಾಗೂ ರೂ 3,34,400 ಮೌಲ್ಯದ ಒಟ್ಟು 88 ಗ್ರಾಂ ಚಿನ್ನಾಭರಣಗಳಿತ್ತು ಎಂದು ವಿವರಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ 117/2023 ಕಲಂ; 379 ಐಪಿಸಿ ಯಂತೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Related posts

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya
error: Content is protected !!