22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

ಬೆಳ್ತಂಗಡಿ: ಲಾಯಿಲದ ಗ್ಯಾರೇಜ್ ಬಳಿ ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಹಾಗೂ ಮಕ್ಕಳ ವಸ್ರ್ತವಿದ್ದ ಬ್ಯಾಗ್ ಕಳವಾದ ಬಗ್ಗೆ ವರದಿಯಾಗಿದೆ.


ಕಕ್ಕಿಂಜೆ ಸನಿಹದ ಚಿಬಿದ್ರೆ ನಿವಾಸಿ ಅಬ್ದುಲ್‌ಜಲೀಲ್ ಅವರ ಕಾರಿನಿಂದ ಈ ಬ್ಯಾಗ್ ಕಳವಾಗಿದೆ.
ಜಲೀಲ್ ಅವರು ಪತ್ನಿ, ನಾಲ್ವರು ಮಕ್ಕಳು ಹಾಗೂ ಸಹೋದರಿ ಜೊತೆ ಪ್ರಯಾಣಿಸುತ್ತಿದ್ದ ವೇಳೆ ಲಾಯಿಲ ಜಂಕ್ಷನ್ ಬಳಿ ಗ್ಯಾರೇಜ್‌ಗೆ ತೆರಳಿದ್ದರು. ಈ ವೇಳೆ ಚಾಣಾಕ್ಷ ಕಳ್ಳರು ಕಾರಿನಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಬಟ್ಟೆ ಇದ್ದ ಬ್ಯಾಗನ್ನು ಎಗರಿಸಿದ್ದಾರೆ.

ಈ ಸಂಬಂಧ ಜಲೀಲ್ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಬ್ಯಾಗಿನಲ್ಲಿ ರೂ 1,500/- ನಗದು ಹಣ, ಮಕ್ಕಳ ಬಟ್ಟೆ ಹಾಗೂ ರೂ 3,34,400 ಮೌಲ್ಯದ ಒಟ್ಟು 88 ಗ್ರಾಂ ಚಿನ್ನಾಭರಣಗಳಿತ್ತು ಎಂದು ವಿವರಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ 117/2023 ಕಲಂ; 379 ಐಪಿಸಿ ಯಂತೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Related posts

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya
error: Content is protected !!