24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

ಬೆಳ್ತಂಗಡಿ: ಲಾಯಿಲದ ಗ್ಯಾರೇಜ್ ಬಳಿ ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಹಾಗೂ ಮಕ್ಕಳ ವಸ್ರ್ತವಿದ್ದ ಬ್ಯಾಗ್ ಕಳವಾದ ಬಗ್ಗೆ ವರದಿಯಾಗಿದೆ.


ಕಕ್ಕಿಂಜೆ ಸನಿಹದ ಚಿಬಿದ್ರೆ ನಿವಾಸಿ ಅಬ್ದುಲ್‌ಜಲೀಲ್ ಅವರ ಕಾರಿನಿಂದ ಈ ಬ್ಯಾಗ್ ಕಳವಾಗಿದೆ.
ಜಲೀಲ್ ಅವರು ಪತ್ನಿ, ನಾಲ್ವರು ಮಕ್ಕಳು ಹಾಗೂ ಸಹೋದರಿ ಜೊತೆ ಪ್ರಯಾಣಿಸುತ್ತಿದ್ದ ವೇಳೆ ಲಾಯಿಲ ಜಂಕ್ಷನ್ ಬಳಿ ಗ್ಯಾರೇಜ್‌ಗೆ ತೆರಳಿದ್ದರು. ಈ ವೇಳೆ ಚಾಣಾಕ್ಷ ಕಳ್ಳರು ಕಾರಿನಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಬಟ್ಟೆ ಇದ್ದ ಬ್ಯಾಗನ್ನು ಎಗರಿಸಿದ್ದಾರೆ.

ಈ ಸಂಬಂಧ ಜಲೀಲ್ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಬ್ಯಾಗಿನಲ್ಲಿ ರೂ 1,500/- ನಗದು ಹಣ, ಮಕ್ಕಳ ಬಟ್ಟೆ ಹಾಗೂ ರೂ 3,34,400 ಮೌಲ್ಯದ ಒಟ್ಟು 88 ಗ್ರಾಂ ಚಿನ್ನಾಭರಣಗಳಿತ್ತು ಎಂದು ವಿವರಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ 117/2023 ಕಲಂ; 379 ಐಪಿಸಿ ಯಂತೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಜ.14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಸಮರ್ಪಣೆಯಾಗಲಿದೆ 80 ಕೆಜಿ ತೂಕದ ಘಂಟೆ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya
error: Content is protected !!