September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

ಬೆಳ್ತಂಗಡಿ: ಲಾಯಿಲದ ಗ್ಯಾರೇಜ್ ಬಳಿ ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಹಾಗೂ ಮಕ್ಕಳ ವಸ್ರ್ತವಿದ್ದ ಬ್ಯಾಗ್ ಕಳವಾದ ಬಗ್ಗೆ ವರದಿಯಾಗಿದೆ.


ಕಕ್ಕಿಂಜೆ ಸನಿಹದ ಚಿಬಿದ್ರೆ ನಿವಾಸಿ ಅಬ್ದುಲ್‌ಜಲೀಲ್ ಅವರ ಕಾರಿನಿಂದ ಈ ಬ್ಯಾಗ್ ಕಳವಾಗಿದೆ.
ಜಲೀಲ್ ಅವರು ಪತ್ನಿ, ನಾಲ್ವರು ಮಕ್ಕಳು ಹಾಗೂ ಸಹೋದರಿ ಜೊತೆ ಪ್ರಯಾಣಿಸುತ್ತಿದ್ದ ವೇಳೆ ಲಾಯಿಲ ಜಂಕ್ಷನ್ ಬಳಿ ಗ್ಯಾರೇಜ್‌ಗೆ ತೆರಳಿದ್ದರು. ಈ ವೇಳೆ ಚಾಣಾಕ್ಷ ಕಳ್ಳರು ಕಾರಿನಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಬಟ್ಟೆ ಇದ್ದ ಬ್ಯಾಗನ್ನು ಎಗರಿಸಿದ್ದಾರೆ.

ಈ ಸಂಬಂಧ ಜಲೀಲ್ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಬ್ಯಾಗಿನಲ್ಲಿ ರೂ 1,500/- ನಗದು ಹಣ, ಮಕ್ಕಳ ಬಟ್ಟೆ ಹಾಗೂ ರೂ 3,34,400 ಮೌಲ್ಯದ ಒಟ್ಟು 88 ಗ್ರಾಂ ಚಿನ್ನಾಭರಣಗಳಿತ್ತು ಎಂದು ವಿವರಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ 117/2023 ಕಲಂ; 379 ಐಪಿಸಿ ಯಂತೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Related posts

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya
error: Content is protected !!