April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ ತಾಲೂಕು ಸಂಚಾರಿ ಪೊಲೀಸ್ ಠಾಣೆ ಇಲ್ಲಿನ ಸಿಬ್ಬಂದಿಗಳು ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ” ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತೆ” ಯ ಕುರಿತು ಜಾಗೃತಿ ಮೂಡಿಸುವ ಈ ಕೆಳಗಿನ ಮಾಹಿತಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಉಜಿರೆಯಲ್ಲಿ ನೀಡಿದರು.
ರಸ್ತೆಯಲ್ಲಿ ವಿದ್ಯಾರ್ಥಿಗಳು ನಡೆಯುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು, ವಾಹನ ಇನ್ಸೂರೆನ್ಸ್ ಗಳ ಮಹತ್ವ ಮತ್ತು ಅದನ್ನು ಮಾಡಿಸಬೇಕಾದ ಉದ್ದೇಶ, ಲರ್ನಿಂಗ್ ಲೈಸೆನ್ಸ್ ರಿಜಿಸ್ಟರ್ ಮಾಡಿಸುವುದರ ಬಗ್ಗೆ, ಡಿ.ಎಲ್ ಮಾಡಿಸುವುದರ ಬಗ್ಗೆ, ಹೆಲ್ಮೆಟ್ ಧರಿಸುವುದರಿಂದ ಆಗುವ ಪ್ರಯೋಜನ ಮತ್ತು ಧರಿಸದೆ ಇದ್ದಲ್ಲಿ ಆಗುವ ದುಷ್ಪರಿಣಾಮ, ಮಿತಿ ಮೀರಿ ವಾಹನಗಳಲ್ಲಿ ಜನರನ್ನು ಕೂರಿಸುವುದರಿಂದ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಕೊನೆಯದಾಗಿ ವಿದ್ಯಾರ್ಥಿನಿಯರು ಸಂಚಾರಿ ನಿಯಂತ್ರಣ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಇದ್ದ ಪ್ರಶ್ನೆಗಳನ್ನು ಕೇಳುವುದರ ಮೂಲಕ ಉತ್ತರ ಕಂಡುಕೊಂಡರು.
ಶ್ರೀಮತಿ ಸಂಧ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಸುಮಂಗಲಾ ಕಾರ್ಯಕ್ರಮ ನಿರೂಪಿಸಿದರು ಹಾಗೂ ಸ್ವಾಗತಿಸಿ ವಂದಿಸಿದರು‌.

Related posts

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya
error: Content is protected !!