25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ ತಾಲೂಕು ಸಂಚಾರಿ ಪೊಲೀಸ್ ಠಾಣೆ ಇಲ್ಲಿನ ಸಿಬ್ಬಂದಿಗಳು ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ” ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತೆ” ಯ ಕುರಿತು ಜಾಗೃತಿ ಮೂಡಿಸುವ ಈ ಕೆಳಗಿನ ಮಾಹಿತಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಉಜಿರೆಯಲ್ಲಿ ನೀಡಿದರು.
ರಸ್ತೆಯಲ್ಲಿ ವಿದ್ಯಾರ್ಥಿಗಳು ನಡೆಯುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು, ವಾಹನ ಇನ್ಸೂರೆನ್ಸ್ ಗಳ ಮಹತ್ವ ಮತ್ತು ಅದನ್ನು ಮಾಡಿಸಬೇಕಾದ ಉದ್ದೇಶ, ಲರ್ನಿಂಗ್ ಲೈಸೆನ್ಸ್ ರಿಜಿಸ್ಟರ್ ಮಾಡಿಸುವುದರ ಬಗ್ಗೆ, ಡಿ.ಎಲ್ ಮಾಡಿಸುವುದರ ಬಗ್ಗೆ, ಹೆಲ್ಮೆಟ್ ಧರಿಸುವುದರಿಂದ ಆಗುವ ಪ್ರಯೋಜನ ಮತ್ತು ಧರಿಸದೆ ಇದ್ದಲ್ಲಿ ಆಗುವ ದುಷ್ಪರಿಣಾಮ, ಮಿತಿ ಮೀರಿ ವಾಹನಗಳಲ್ಲಿ ಜನರನ್ನು ಕೂರಿಸುವುದರಿಂದ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಕೊನೆಯದಾಗಿ ವಿದ್ಯಾರ್ಥಿನಿಯರು ಸಂಚಾರಿ ನಿಯಂತ್ರಣ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಇದ್ದ ಪ್ರಶ್ನೆಗಳನ್ನು ಕೇಳುವುದರ ಮೂಲಕ ಉತ್ತರ ಕಂಡುಕೊಂಡರು.
ಶ್ರೀಮತಿ ಸಂಧ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಸುಮಂಗಲಾ ಕಾರ್ಯಕ್ರಮ ನಿರೂಪಿಸಿದರು ಹಾಗೂ ಸ್ವಾಗತಿಸಿ ವಂದಿಸಿದರು‌.

Related posts

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya
error: Content is protected !!