September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ ತಾಲೂಕು ಸಂಚಾರಿ ಪೊಲೀಸ್ ಠಾಣೆ ಇಲ್ಲಿನ ಸಿಬ್ಬಂದಿಗಳು ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ” ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತೆ” ಯ ಕುರಿತು ಜಾಗೃತಿ ಮೂಡಿಸುವ ಈ ಕೆಳಗಿನ ಮಾಹಿತಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಉಜಿರೆಯಲ್ಲಿ ನೀಡಿದರು.
ರಸ್ತೆಯಲ್ಲಿ ವಿದ್ಯಾರ್ಥಿಗಳು ನಡೆಯುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು, ವಾಹನ ಇನ್ಸೂರೆನ್ಸ್ ಗಳ ಮಹತ್ವ ಮತ್ತು ಅದನ್ನು ಮಾಡಿಸಬೇಕಾದ ಉದ್ದೇಶ, ಲರ್ನಿಂಗ್ ಲೈಸೆನ್ಸ್ ರಿಜಿಸ್ಟರ್ ಮಾಡಿಸುವುದರ ಬಗ್ಗೆ, ಡಿ.ಎಲ್ ಮಾಡಿಸುವುದರ ಬಗ್ಗೆ, ಹೆಲ್ಮೆಟ್ ಧರಿಸುವುದರಿಂದ ಆಗುವ ಪ್ರಯೋಜನ ಮತ್ತು ಧರಿಸದೆ ಇದ್ದಲ್ಲಿ ಆಗುವ ದುಷ್ಪರಿಣಾಮ, ಮಿತಿ ಮೀರಿ ವಾಹನಗಳಲ್ಲಿ ಜನರನ್ನು ಕೂರಿಸುವುದರಿಂದ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಕೊನೆಯದಾಗಿ ವಿದ್ಯಾರ್ಥಿನಿಯರು ಸಂಚಾರಿ ನಿಯಂತ್ರಣ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಇದ್ದ ಪ್ರಶ್ನೆಗಳನ್ನು ಕೇಳುವುದರ ಮೂಲಕ ಉತ್ತರ ಕಂಡುಕೊಂಡರು.
ಶ್ರೀಮತಿ ಸಂಧ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಸುಮಂಗಲಾ ಕಾರ್ಯಕ್ರಮ ನಿರೂಪಿಸಿದರು ಹಾಗೂ ಸ್ವಾಗತಿಸಿ ವಂದಿಸಿದರು‌.

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!