25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

ಬೆಳ್ತಂಗಡಿ: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.

ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು. ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ.

ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬಧ್ಡರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.

Related posts

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya
error: Content is protected !!