23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ಸಂಜೆ ನಿಧನ

ಬೆಳ್ತಂಗಡಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಬೆಳ್ತಂಗಡಿಯ ತಾಲೂಕಿನ ನಾವೂರು ಗ್ರಾಮದ ಕೇಳ್ತಾಜೆ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ (85ವ) ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಡಿಸೆಂಬರ್ 08 ಇಂದು ಏರುಪೇರು ಉಂಟಾಗಿತ್ತು, ತಕ್ಷಣ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ಅವರು ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.

ಕನ್ನಡದಲ್ಲಿ ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದ ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.
ಕನ್ನಡ ಚಿತ್ರರಂಗಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ.
ಲೀಲಾವತಿ ಅವರು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕೇಳ್ತಾಜೆ ಸಮೀಪದ ನಿವಾಸಿಯಾಗಿದ್ದಾರೆ.

Related posts

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya
error: Content is protected !!