22.6 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನ

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ಸಂಜೆ ನಿಧನ

ಬೆಳ್ತಂಗಡಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಬೆಳ್ತಂಗಡಿಯ ತಾಲೂಕಿನ ನಾವೂರು ಗ್ರಾಮದ ಕೇಳ್ತಾಜೆ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ (85ವ) ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಡಿಸೆಂಬರ್ 08 ಇಂದು ಏರುಪೇರು ಉಂಟಾಗಿತ್ತು, ತಕ್ಷಣ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ಅವರು ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.

ಕನ್ನಡದಲ್ಲಿ ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದ ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.
ಕನ್ನಡ ಚಿತ್ರರಂಗಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ.
ಲೀಲಾವತಿ ಅವರು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕೇಳ್ತಾಜೆ ಸಮೀಪದ ನಿವಾಸಿಯಾಗಿದ್ದಾರೆ.

Related posts

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ನ್ಯಾಯವಾದಿರಾಮಚಂದ್ರ ಶೆಣೈ ನಿಧನ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya
error: Content is protected !!