July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ನಿಡ್ಲೆ: ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಲ್ಲಿ ದೇಣಿಗೆ ಸಂಗ್ರಹಿಸಲು ಬಂದ ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಡ್ಲೆ ಗ್ರಾಮದ ಪರಾಂಡ ನಿವಾಸಿ ಧನುಷ್‌ (24) ಎಂಬವರ ದೂರಿನಂತೆ, ಡಿ.07 ರಂದು ಸಂಜೆ ಸಮಯ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಪರಾಂಡ ಎಂಬಲ್ಲಿ ತಮ್ಮ ಮನೆಯಲ್ಲಿರುವಾಗ, ಇಬ್ಬರು ಯುವಕರು ಬಂದು ನಾವು ಬೆಂಗಳೂರಿನಲ್ಲಿರುವ ಸ್ವಾಮಿವಿವೇಕಾನಂದ ಎಂಬ ಸೋಷಿಯಲ್‌ ಸರ್ವಿಸ್‌ ಟ್ರಸ್ಟ್‌ (ರಿ) ಇದರ ವತಿಯಿಂದ ದೇಣಿಗೆ ಸಂಗ್ರಹಣೆಗೆ ಬಂದಿದ್ದು, ದೇಣಿಗೆ ನೀಡುವಂತೆ ಕೇಳಿದಾಗ, ಪಿರ್ಯಾದಿದಾರರು ಸಂಶಯಗೊಂಡು ಅವರಲ್ಲಿದ್ದ ಸಂಸ್ಥೆಯದ್ದೆಂದು ಹೇಳಲಾದ ಮೊಬೈಲ್‌ ನಂಬರ್‌ಗೆ ಕರೆ ಮಾಡಿ ವಿಚಾರಿಸಿದಾಗ ನಾವು ಯಾರನ್ನೂ ಕಳುಹಿಸಿರುವುದಿಲ್ಲವೆಂದು ತಿಳಿಸಿರುತ್ತಾರೆ. ಆದ್ದರಿಂದ ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಿನಲ್ಲಿ ಹಣ ಸಂಗ್ರಹಣೆ ಮಾಡಿ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವುದಾಗಿ ಆರೋಪಿತರ ಮೇಲೆ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 99/2023 ಕಲಂ: 420 ಜೊತೆಗೆ 34 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!