25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ನಿಡ್ಲೆ: ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಲ್ಲಿ ದೇಣಿಗೆ ಸಂಗ್ರಹಿಸಲು ಬಂದ ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಡ್ಲೆ ಗ್ರಾಮದ ಪರಾಂಡ ನಿವಾಸಿ ಧನುಷ್‌ (24) ಎಂಬವರ ದೂರಿನಂತೆ, ಡಿ.07 ರಂದು ಸಂಜೆ ಸಮಯ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಪರಾಂಡ ಎಂಬಲ್ಲಿ ತಮ್ಮ ಮನೆಯಲ್ಲಿರುವಾಗ, ಇಬ್ಬರು ಯುವಕರು ಬಂದು ನಾವು ಬೆಂಗಳೂರಿನಲ್ಲಿರುವ ಸ್ವಾಮಿವಿವೇಕಾನಂದ ಎಂಬ ಸೋಷಿಯಲ್‌ ಸರ್ವಿಸ್‌ ಟ್ರಸ್ಟ್‌ (ರಿ) ಇದರ ವತಿಯಿಂದ ದೇಣಿಗೆ ಸಂಗ್ರಹಣೆಗೆ ಬಂದಿದ್ದು, ದೇಣಿಗೆ ನೀಡುವಂತೆ ಕೇಳಿದಾಗ, ಪಿರ್ಯಾದಿದಾರರು ಸಂಶಯಗೊಂಡು ಅವರಲ್ಲಿದ್ದ ಸಂಸ್ಥೆಯದ್ದೆಂದು ಹೇಳಲಾದ ಮೊಬೈಲ್‌ ನಂಬರ್‌ಗೆ ಕರೆ ಮಾಡಿ ವಿಚಾರಿಸಿದಾಗ ನಾವು ಯಾರನ್ನೂ ಕಳುಹಿಸಿರುವುದಿಲ್ಲವೆಂದು ತಿಳಿಸಿರುತ್ತಾರೆ. ಆದ್ದರಿಂದ ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಿನಲ್ಲಿ ಹಣ ಸಂಗ್ರಹಣೆ ಮಾಡಿ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವುದಾಗಿ ಆರೋಪಿತರ ಮೇಲೆ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 99/2023 ಕಲಂ: 420 ಜೊತೆಗೆ 34 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya
error: Content is protected !!