ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.8 ರಂದು 7ನೇ ತರಗತಿಯಲ್ಲಿ ಮತ್ತು 2ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾದ ಶ್ರೇಯಾoಕ್ ವಿ ನಾಯಕ್ ಮತ್ತು ಸಾನ್ವಿ ವಿ. ನಾಯಕ್ ರ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದು ಅವರ ವೈದ್ಯಕೀಯ ವೆಚ್ಚಕ್ಕಾಗಿ ಶಾಲಾ ಮಕ್ಕಳಿಂದ ಮತ್ತು ಶಿಕ್ಷಕರಿಂದ ಸಂಗ್ರಹಿಸಿದ ರೂ.36,550 ಗಳನ್ನು ಅವರ ಪತ್ನಿ ಶ್ರೀಮತಿ ಜ್ಯೋತಿ ಯವರಿಗೆ ಹಸ್ತಾಂತರ ಮಾಡಲಾಯಿತು.


ಶಾಲಾ ಪ್ರಾರ್ಥನಾ ಅವಧಿಯಲ್ಲಿ ಮುಖ್ಯ ಗುರುಗಳಾದ ಪಿ ಸುಬ್ರಹ್ಮಣ್ಯ ರಾವ್ ಮಾತನಾಡಿ ಶ್ರೀಯುತರ ಆರೋಗ್ಯ ಸಮಸ್ಯೆಯು ಬೇಗನೆ ಗುಣಮುಖವಾಗಲಿ ಎಂದು ಹಾರೈಸಿದರು.

Leave a Comment

error: Content is protected !!