22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

ಉಜಿರೆಯಿಂದ ಸುಮಾರು ಹತ್ತು ಕಿ.ಮೀ ದೂರದ ಧರ್ಮಸ್ಥಳಕ್ಕೆ ಪಾದಯಾತ್ರಿಗಳು ಬರುತ್ತಿದ್ದಂತೆ ಧರ್ಮಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ವತಿಯಿಂದ ವಾದ್ಯಘೋಷಗಳೊಂದಿಗೆ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಡಾ. ಹೆಗ್ಗಡೆಯವರ ಆಪ್ತ ಸಹಾಯಕ ಎ. ವೀರೂ ಶೆಟ್ಟಿ, ದೇವಸ್ಥಾನದ ಪಾರುಪತ್ಯೆಗಾರ ಲಕ್ಷ್ಮೀನಾರಾಯಣ ರಾವ್ ಮತ್ತಿತರರು ಪಾದಯಾತ್ರಿಗಳನ್ನು ಸ್ವಾಗತಿಸಿದರು.

ಅಮೃತವರ್ಷಿಣಿ ಸಭಾ ಭವನದಲ್ಲೂ ಹಳೆಕೋಟೆಯ ಶ್ರೀ ಭಗವಾನ್ ಶಿರ್ಡಿ ಸಾಯಿ ಸತ್ಯಸಾಯಿ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ ಜರುಗಿತು.
ಪಾದಯಾತ್ರಿಗಳು ಶಿಸ್ತುಬದ್ಧವಾಗಿ ಸಾಗಿದರು. ಪಾದಯಾತ್ರೆಯುದ್ದಕ್ಕೂ ಜನರು ದೇವರ ನಾಮಸ್ಮರಣೆ ಮಾಡುತ್ತಾ ಸಾಗಿದರು. ಕನ್ಯಾಡಿಯಲ್ಲಿ ಸೇವಾ ಭಾರತಿ, ಶಾಂತಿವನ ಹಾಗೂ ಇತರ ಕಡೆಗಳಲ್ಲೂ ಪಾದಯಾತ್ರಿಗಳಿಗೆ ಶರಬತ್, ಕುಡಿಯುವ ನೀರು, ಪಾನೀಯ, ಪಾನಕದ ವ್ಯವಸ್ಥೆಯನ್ನು ಮಾಡಿದರು.


ಆಕರ್ಷಣೆಗಳಿಸಿದ ಪಾದಯಾತ್ರೆ:
ಉಜಿರೆ ರಥಬೀದಿಯಿಂದ ಧರ್ಮಸ್ಥಳ ತನಕ ನಡೆದ ಪಾದಯಾತ್ರೆಯಲ್ಲಿ ಮುಂಚೂಣಿಯಲ್ಲಿ ಭಜನಾ ತಂಡಗಳು, ಚೆಂಡೆ, ಕೊಂಬು, ಕಹಳೆ, ವಿವಿಧ ವೇಷ, ಭೂಷಣಗಳ ತಂಡಗಳು ತಾಲೂಕಿನ ವಿವಿಧ ಭಜನಾ ಮಂಡಳಗಳ ತಂಡ ಮೆರವಣಿಗೆ ಜೊತೆ ಸಾಗಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಗತಿ ಬಂಧು ತಂಡಗಳು, ಕ್ಷೇತ್ರದ ಸಿಬ್ಬಂದಿಗಳು, ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ನಾಗರಿಕರು ಮೆರವಣಿಗೆಯುದ್ದಕ್ಕೂ ಸಾಗಿದರು.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya
error: Content is protected !!