24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

ಉಜಿರೆಯಿಂದ ಸುಮಾರು ಹತ್ತು ಕಿ.ಮೀ ದೂರದ ಧರ್ಮಸ್ಥಳಕ್ಕೆ ಪಾದಯಾತ್ರಿಗಳು ಬರುತ್ತಿದ್ದಂತೆ ಧರ್ಮಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ವತಿಯಿಂದ ವಾದ್ಯಘೋಷಗಳೊಂದಿಗೆ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಡಾ. ಹೆಗ್ಗಡೆಯವರ ಆಪ್ತ ಸಹಾಯಕ ಎ. ವೀರೂ ಶೆಟ್ಟಿ, ದೇವಸ್ಥಾನದ ಪಾರುಪತ್ಯೆಗಾರ ಲಕ್ಷ್ಮೀನಾರಾಯಣ ರಾವ್ ಮತ್ತಿತರರು ಪಾದಯಾತ್ರಿಗಳನ್ನು ಸ್ವಾಗತಿಸಿದರು.

ಅಮೃತವರ್ಷಿಣಿ ಸಭಾ ಭವನದಲ್ಲೂ ಹಳೆಕೋಟೆಯ ಶ್ರೀ ಭಗವಾನ್ ಶಿರ್ಡಿ ಸಾಯಿ ಸತ್ಯಸಾಯಿ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ ಜರುಗಿತು.
ಪಾದಯಾತ್ರಿಗಳು ಶಿಸ್ತುಬದ್ಧವಾಗಿ ಸಾಗಿದರು. ಪಾದಯಾತ್ರೆಯುದ್ದಕ್ಕೂ ಜನರು ದೇವರ ನಾಮಸ್ಮರಣೆ ಮಾಡುತ್ತಾ ಸಾಗಿದರು. ಕನ್ಯಾಡಿಯಲ್ಲಿ ಸೇವಾ ಭಾರತಿ, ಶಾಂತಿವನ ಹಾಗೂ ಇತರ ಕಡೆಗಳಲ್ಲೂ ಪಾದಯಾತ್ರಿಗಳಿಗೆ ಶರಬತ್, ಕುಡಿಯುವ ನೀರು, ಪಾನೀಯ, ಪಾನಕದ ವ್ಯವಸ್ಥೆಯನ್ನು ಮಾಡಿದರು.


ಆಕರ್ಷಣೆಗಳಿಸಿದ ಪಾದಯಾತ್ರೆ:
ಉಜಿರೆ ರಥಬೀದಿಯಿಂದ ಧರ್ಮಸ್ಥಳ ತನಕ ನಡೆದ ಪಾದಯಾತ್ರೆಯಲ್ಲಿ ಮುಂಚೂಣಿಯಲ್ಲಿ ಭಜನಾ ತಂಡಗಳು, ಚೆಂಡೆ, ಕೊಂಬು, ಕಹಳೆ, ವಿವಿಧ ವೇಷ, ಭೂಷಣಗಳ ತಂಡಗಳು ತಾಲೂಕಿನ ವಿವಿಧ ಭಜನಾ ಮಂಡಳಗಳ ತಂಡ ಮೆರವಣಿಗೆ ಜೊತೆ ಸಾಗಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಗತಿ ಬಂಧು ತಂಡಗಳು, ಕ್ಷೇತ್ರದ ಸಿಬ್ಬಂದಿಗಳು, ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ನಾಗರಿಕರು ಮೆರವಣಿಗೆಯುದ್ದಕ್ಕೂ ಸಾಗಿದರು.

Related posts

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!