25.5 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ಸಂಜೆ ನಿಧನ

ಬೆಳ್ತಂಗಡಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಬೆಳ್ತಂಗಡಿಯ ತಾಲೂಕಿನ ನಾವೂರು ಗ್ರಾಮದ ಕೇಳ್ತಾಜೆ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ (85ವ) ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಡಿಸೆಂಬರ್ 08 ಇಂದು ಏರುಪೇರು ಉಂಟಾಗಿತ್ತು, ತಕ್ಷಣ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ಅವರು ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.

ಕನ್ನಡದಲ್ಲಿ ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದ ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.
ಕನ್ನಡ ಚಿತ್ರರಂಗಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ.
ಲೀಲಾವತಿ ಅವರು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕೇಳ್ತಾಜೆ ಸಮೀಪದ ನಿವಾಸಿಯಾಗಿದ್ದಾರೆ.

Related posts

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ ನಿಧನ

Suddi Udaya

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

Suddi Udaya
error: Content is protected !!