ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಜಿಲ್ಲಾ ಮಟ್ಟದಲ್ಲಿ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಂಸ್ದೆ ಮಂಗಳೂರು ಹಾಗೂ ಎಕ್ಸಲೆಂಟ್ ಮುಡಬಿದ್ರೆ ಇವರ ಜಂಟಿ ಆಶ್ರಯದಲ್ಲಿ ನಡೆದಂತಹ ಜೂನಿಯರ್ ರೆಡ್ ಕ್ರಾಸ್ ಸಮ್ಮೇಳನ 2023 ರಲ್ಲಿ ಮೊದಲ ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಘಟಕವಾಗಿ ಜಿಲ್ಲಾ ಸಂಸ್ಥೆಯಿಂದ ಗುರುತಿಸಿಕೊಂಡಿದೆ.

ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಶ್ರೀಮತಿ ಪ್ರಮೀಳ ಪ್ರಶಸ್ತಿಯನ್ನು ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಂಸ್ಥೆ ದಕ್ಷಿಣ ಕನ್ನಡದಿಂದ ಗುರುತಿಸಿಕೊಂಡು ಸನ್ಮಾನಿಸಲ್ಪಟ್ಟಿರುತ್ತಾರೆ.

Leave a Comment

error: Content is protected !!