24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

ಬೆಳ್ತಂಗಡಿ: ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮವನ್ನು ಗೋಶಾಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಉದ್ಯಮಿ ಶಶಿಧ‌ರ್ ಶೆಟ್ಟಿ ದಂಪತಿ ಮಾದರಿಯಾಗಿದ್ದು ಡಿ.07 ರಂದು ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿರುವ ಸ್ವಾಮೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪ್ರವರ್ತಿತ ನಂದಗೋಕುಲ ಗೋಶಾಲೆಗೆ ಪತ್ನಿ ಪ್ರಮೀಳಾ ಶಶಿಧರ್ ಶೆಟ್ಟಿ ಹಾಗೂ ಕುಟುಂಬಸ್ಥರ ಜೊತೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದರು.

ಈ ವೇಳೆ ಸುಮಾರು ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ ನೀಡಿದರಲ್ಲದೇ ಮುಂದಿನ ಹತ್ತು ದಿನಗಳ ಒಳಗೆ ಮೆಷಿನ್ ತರಿಸುವ ಬಗ್ಗೆಯೂ ತಿಳಿಸಿದರು.

ಈ ವೇಳೆ ಮಾತನಾಡಿದ ಶಶಿಧರ್ ಶೆಟ್ಟಿಯವರು ಗೋಶಾಲೆಯ ಕೆಲವೊಂದು ಸಮಸ್ಯೆಗಳ ಬಗ್ಗೆ ಟ್ರಸ್ಟ್ ನವರು ನನ್ನ ಗಮನಕ್ಕೆ ತಂದಾಗ ಪ್ರಮುಖವಾಗಿ ಗೋವುಗಳಿಗೆ ಅಡಿಕೆ ಹಾಳೆ ಅತ್ಯುತ್ತಮ ಆಹಾರವಾಗಿದ್ದು ಇದನ್ನು ಹುಡಿ ಮಾಡುವ ಯಂತ್ರದ ಅವಶ್ಯಕತೆ ಇದ್ದು ಇದಕ್ಕೆ ಸುಮಾರು 1.50 ಲಕ್ಷ ರೂ ಅವಶ್ಯಕತೆ ಇದೆ ಒಂದು ವೇಳೆ ಅಂತಹ ಮೆಷಿನ್ ಇದ್ದಲ್ಲಿ ತಿಂಗಳಲ್ಲಿ ಸುಮಾರು 50 ಸಾವಿರದಷ್ಟು ಖರ್ಚಿನ ಹೊರೆ ಕಡಿಮೆಯಾಗಲಿದೆ ಎಂಬ ಮಾಹಿತಿಯಂತೆ ಸಂತೋಷದಿಂದ ಒಪ್ಪಿ ಮೆಷಿನ್ ಖರೀದಿಯ ಬಗ್ಗೆ ತಿಳಿಸಿದ್ದೇನೆ. ಅದಲ್ಲದೇ ಮುಂದಿನ ದಿನಗಳಲ್ಲಿ ಗೋ ಶಾಲೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು ಮಾದರಿ ರೀತಿಯಲ್ಲಿ ಈ ಗೋ ಶಾಲೆ ಮುನ್ನಡೆಯುವ ನಿಟ್ಟಿನಲ್ಲಿ ಸದಾ ಪ್ರೋತ್ಸಾಹ ನೀಡಲಿದ್ದೇನೆ ಎಂದರು. ಮುಂಬರುವ ಗೋಕುಲದ ದೀಪೋತ್ಸವ ಕಾರ್ಯಕ್ರಮಕ್ಕೂ ತನ್ನಿಂದಾಗುವ ನೆರವು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.


ಈ ಸಂದರ್ಭದಲ್ಲಿ ಗೋಶಾಲೆಯ ವತಿಯಿಂದ ಶಶಿಧ‌ರ್ ಶೆಟ್ಟಿ ದಂಪತಿಗಳನ್ನು ಗೌರವಿಸಲಾಯಿತು.

ಈ ವೇಳೆ ಟ್ರಸ್ಟ್ ಅಧ್ಯಕ್ಷ ಡಾ.ದಯಾಕರ್, ಕಾರ್ಯದರ್ಶಿ ಸುಬ್ರಹ್ಮಣ್ಯ ಅಗರ್ತ, ಟ್ರಸ್ಟಿಗಳಾದ ರಮೇಶ್ ಪ್ರಭು, ಭಾಸ್ಕರ ಧರ್ಮಸ್ಥಳ, ದೀಪೋತ್ಸವ ಸಮಿತಿ ಅಧ್ಯಕ್ಷ ನಾರಾಯಣ ಗೌಡ ಕೊಳಂಬೆ, ಗಣೇಶ್ ಉಜಿರೆ, ಆದರ್ಶ್, ಶಶಿಧರ್ ಶೆಟ್ಟಿ ಕುಟುಂಬಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ನೀಟ್ ಪರೀಕ್ಷೆ ಅಕ್ರಮ, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ದೆಹಲಿಯಲ್ಲಿ ಸಂಸತ್ ಮುತ್ತಿಗೆ : ದೆಹಲಿ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Suddi Udaya

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya
error: Content is protected !!