April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಉದ್ಘಾಟಣೆಯನ್ನು ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್ ರವರು ನೆರವೇರಿಸಿ ಮಾತನಾಡಿ ಮಕ್ಕಳು ಮಣ್ಣಿನ ಮುದ್ದೆ ಇದ್ದಂತೆ , ಅವರನ್ನು ಸರಿಯಾದ ರೂಪ ನೀಡುವುದು ಹೆತ್ತವರ ಕರ್ತವ್ಯವಾದರೆ , ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಸಂಘ-ಸಂಸ್ಥೆ ಮಾಡಬೇಕು . ಆ ನಿಟ್ಟಿನಲ್ಲಿ ಮಹಿಳಾ ವೃಂದ ಮಹತ್ವದ ಪಾತ್ರವಹಿಸಿದೆ ಎಂದು ಹೇಳಿದರು.
ಸಂಧ್ಯಾ ಪಾಳಂದೆ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಉಮಾ ಆರ್ ರಾವ್ ಅವರು ಸ್ವಾಗತಿಸಿ, ಉದ್ಘಾಟಕರ ಪರಿಚಯವನ್ನು ಕಾರ್ಯದರ್ಶಿ ವೀಣಾ ವಿನೋದ್ ಅವರು ಮಾಡಿದರು . ಕಾರ್ಯಕ್ರಮದ ನಿರೂಪಣೆಯನ್ನು ರಶ್ಮಿ ಪಟವರ್ಧನ್ ರವರು ಮಾಡಿದರು . ಅಧ್ಯಕ್ಷೆ ಆಶಾ ಸತೀಶ್ ರವರು ಮಕ್ಕಳಿಗೆ ಶುಭಾಶಯ ಕೋರಿದರು.
ಸ್ಪರ್ಧೆಗಳ ತೀರ್ಪುಗಾರರಾಗಿ ಶ್ರೀಮತಿ ಮಂಗಳ ರತ್ನಾಕರ್ , ಅಧ್ಯಾಪಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಡಗಕಾರಂದರು ಹಾಗೂ ಇನ್ನೊಬ್ಬರು ಶ್ರೀಮತಿ ಭಾರತಿ ದಿವಾಕರ್ , ಪ್ರಾಧ್ಯಾಪಕಿ ಸರಕಾರಿ ಪದವಿ ಪೂರ್ವ ಕಾಲೇಜು ಅಳದಂಗಡಿ ಆಗಮಿಸಿ ಮಕ್ಕಳಿಗೆ ಸ್ಪರ್ಧೆಯ ಫಲಿತಾಂಶವನ್ನು ನೀಡಿದರು.


ಮಹಿಳಾ ವೃಂದವು ಮಕ್ಕಳ ವೇದಿಕೆಯನ್ನು ಆಯೋಜಿಸಿದ್ದು , ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಕುಮಾರಿ ನಿಶಾ ಅಧ್ಯಕ್ಷರಾಗಿ , ಚರ್ಚ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕುಮಾರಿ ಪೃಥ್ವಿ ಅತಿಥಿಯಾಗಿಯೂ , ಕುಮಾರಿ ದಿವ್ಯ ದ .ಕ . ಜಿ. ಪ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇವರು ಮಕ್ಕಳ ವೇದಿಕೆಯ ಕಾರ್ಯಕ್ರಮ ನಿರೂಪಣೆ ಮಾಡಿದರು . ಶ್ರೀಮತಿ ವೀಣಾ ಆರ್ ಮಯ್ಯ ಧನ್ಯವಾದವಿತ್ತರು.
ಕಾರ್ಯಕ್ರಮದಲ್ಲಿ ಮಹಿಳಾ ವೃಂದದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya
error: Content is protected !!