32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

ಕುವೆಟ್ಟು: ಸರಕಾರಿ ಶಾಲೆಯಲ್ಲಿ ವಿಧ್ಯಾಭ್ಯಾಸ ಮಾಡಿದ ಮಕ್ಕಳು ಉನ್ನತ ಸ್ಥಾನವನ್ನು ಪಡೆಯುತ್ತಾರೆ ಎಂಬುವುದು ಇಲ್ಲಿಯ ಓಡಿಲ್ನಾಳ ಶಾಲೆಯ ಹಿರಿಯ ವಿಧ್ಯಾರ್ಥಿಗಳೇ ಸಾಕ್ಷಿ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ‌ ಕರ್ತವ್ಯ ನಮ್ಮದಾಗಬೇಕು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಡಿ 9 ರಂದು ಶಾಲಾ ಶಿಕ್ಷಣ ಇಲಾಖೆ ದ ಕ ಜಿ ಪಂ ಉ ಪ್ರಾ‌ ಶಾಲೆ ಓಡಿಲ್ನಾಳ ಇದರ ಶಾಲಾ‌ ವಾರ್ಷಿಕೋತ್ಸವ ಸಾಂಸ್ಕ್ರತಿಕ ಸಿಂಚನ ಕಾರ್ಯಕ್ರಮದ ಬೆಳಗ್ಗಿನ ಸಭಾ ಕಾರ್ಯಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತಾನಾಡಿದರು.
ಕುವೆಟ್ಟು ಗ್ರಾ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಧ್ವಜಾರೋಹಣ ಮಾಡಿ, ಕಾರ್ಯಕ್ರಮವನ್ನು‌ ದೀಪ ಬೆಳಗಿಸಿ ಚಾಲನೆ ನೀಡಿದರು. ಶಾಲಾ ಎಸ್ ಡಿ ಯಂ ಸಿ ಉಪಾಧ್ಯಕ್ಷೆ ಸಮೀಮ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಎಸ್ ಡಿ ಯಂ‌ ಸಿ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ಕುವೆಟ್ಟು ಗ್ರಾ ಪಂ ಸದಸ್ಯೆ ಆನಂದಿ. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ‌ ಅರುಣ್ ಸುಮಿತ್ ಡಿಸೋಜ, ವರ್ಗಾವಣೆಗೊಂಡ ಶಿಕ್ಷಕಿ ದೀಪಾವತಿ, ಹಿರಿಯ ವಿದ್ಯಾರ್ಥಿ ಪದ್ಮಾವತಿ, ವಿದ್ಯಾರ್ಥಿ ನಾಯಕ ಪಾಝಿಲ್, ಶಾಲಾ ಮುಖ್ಯೋಪಾಧ್ಯಾಯನಿ ಉಷಾ ಪಿ. ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಿದ ಶಾಲಾ ಅವರಣದ ಗೇಟು. ಅಂಗಣಕ್ಕೆ ಅಳವಡಿಸಿದ ಇಂಟರ್ ಲಾಕ್. ಗಾರ್ಡನ್ ಇದರ ಉದ್ಘಾಟನೆ ನಡೆಯಿತು. ದೈಹಿಕ ಶಿಕ್ಷಕ ನಿರಂಜನ್, ಸಹ ಶಿಕ್ಷಕಿ ಸುಜಾತ, ಶಿಕ್ಷಕಿ ಶಾರದ ಮಣಿ, ನಯನ ಟಿ, ಜಿ ಪಿ ಟಿ ಶಿಕ್ಷಕಿ ವೀಣಾ ಕೆ ಎಸ್, ವಿಲ್ಮೆಂಟ್ ಸೆರಾವೋ. ಜಿ ಪಿ ಟಿ ಶಿಕ್ಷಕಿ ಅಕ್ಷತಾ, ಗೌರವ ಶಿಕ್ಷಕಿ ಸುಮತಿ ಹಾಗೂ ಎಸ್ ಡಿ ಯಂ ಸಿ ಸದಸ್ಯರು. ಅಕ್ಷರ ದಾಸೋಹ ಸಿಬಂದಿಗಳು ಸಹಕರಿಸಿದರು.

Related posts

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya
error: Content is protected !!