September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

ಕುವೆಟ್ಟು: ಸರಕಾರಿ ಶಾಲೆಯಲ್ಲಿ ವಿಧ್ಯಾಭ್ಯಾಸ ಮಾಡಿದ ಮಕ್ಕಳು ಉನ್ನತ ಸ್ಥಾನವನ್ನು ಪಡೆಯುತ್ತಾರೆ ಎಂಬುವುದು ಇಲ್ಲಿಯ ಓಡಿಲ್ನಾಳ ಶಾಲೆಯ ಹಿರಿಯ ವಿಧ್ಯಾರ್ಥಿಗಳೇ ಸಾಕ್ಷಿ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ‌ ಕರ್ತವ್ಯ ನಮ್ಮದಾಗಬೇಕು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಡಿ 9 ರಂದು ಶಾಲಾ ಶಿಕ್ಷಣ ಇಲಾಖೆ ದ ಕ ಜಿ ಪಂ ಉ ಪ್ರಾ‌ ಶಾಲೆ ಓಡಿಲ್ನಾಳ ಇದರ ಶಾಲಾ‌ ವಾರ್ಷಿಕೋತ್ಸವ ಸಾಂಸ್ಕ್ರತಿಕ ಸಿಂಚನ ಕಾರ್ಯಕ್ರಮದ ಬೆಳಗ್ಗಿನ ಸಭಾ ಕಾರ್ಯಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತಾನಾಡಿದರು.
ಕುವೆಟ್ಟು ಗ್ರಾ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಧ್ವಜಾರೋಹಣ ಮಾಡಿ, ಕಾರ್ಯಕ್ರಮವನ್ನು‌ ದೀಪ ಬೆಳಗಿಸಿ ಚಾಲನೆ ನೀಡಿದರು. ಶಾಲಾ ಎಸ್ ಡಿ ಯಂ ಸಿ ಉಪಾಧ್ಯಕ್ಷೆ ಸಮೀಮ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಎಸ್ ಡಿ ಯಂ‌ ಸಿ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ಕುವೆಟ್ಟು ಗ್ರಾ ಪಂ ಸದಸ್ಯೆ ಆನಂದಿ. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ‌ ಅರುಣ್ ಸುಮಿತ್ ಡಿಸೋಜ, ವರ್ಗಾವಣೆಗೊಂಡ ಶಿಕ್ಷಕಿ ದೀಪಾವತಿ, ಹಿರಿಯ ವಿದ್ಯಾರ್ಥಿ ಪದ್ಮಾವತಿ, ವಿದ್ಯಾರ್ಥಿ ನಾಯಕ ಪಾಝಿಲ್, ಶಾಲಾ ಮುಖ್ಯೋಪಾಧ್ಯಾಯನಿ ಉಷಾ ಪಿ. ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಿದ ಶಾಲಾ ಅವರಣದ ಗೇಟು. ಅಂಗಣಕ್ಕೆ ಅಳವಡಿಸಿದ ಇಂಟರ್ ಲಾಕ್. ಗಾರ್ಡನ್ ಇದರ ಉದ್ಘಾಟನೆ ನಡೆಯಿತು. ದೈಹಿಕ ಶಿಕ್ಷಕ ನಿರಂಜನ್, ಸಹ ಶಿಕ್ಷಕಿ ಸುಜಾತ, ಶಿಕ್ಷಕಿ ಶಾರದ ಮಣಿ, ನಯನ ಟಿ, ಜಿ ಪಿ ಟಿ ಶಿಕ್ಷಕಿ ವೀಣಾ ಕೆ ಎಸ್, ವಿಲ್ಮೆಂಟ್ ಸೆರಾವೋ. ಜಿ ಪಿ ಟಿ ಶಿಕ್ಷಕಿ ಅಕ್ಷತಾ, ಗೌರವ ಶಿಕ್ಷಕಿ ಸುಮತಿ ಹಾಗೂ ಎಸ್ ಡಿ ಯಂ ಸಿ ಸದಸ್ಯರು. ಅಕ್ಷರ ದಾಸೋಹ ಸಿಬಂದಿಗಳು ಸಹಕರಿಸಿದರು.

Related posts

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ನಾರಾವಿ ವಲಯ ಮಟ್ಟದ ಬಾಲಕ–ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya
error: Content is protected !!