March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು(ಡಿ .10) ಬೆಳಿಗ್ಗೆ ಪತ್ತೆಯಾಗಿದೆ.

ಜನರು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಶವ ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು ಪೊಲೀಸರು ಉಜಿರೆ ಘಟಕ ಪ್ರತಿನಿಧಿ ರವೀಂದ್ರ ಇವರಿಗೆ ಬೆಳಿಗ್ಗೆ 5.30 ರ ವೇಳೆಗೆ ಫೋನ್ ಕರೆ ಮಾಡಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿದ ಇವರು ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಾದ ಶಿಶಿಲ-ಅರಿಸಿನಮಕ್ಕಿ ಘಟಕದ ಅವಿನಾಶ್ ಬಿಡೆ, ಉಜಿರೆ ಘಟಕದ ರಾಘವೇಂದ್ರ, ಶಶಿಕುಮಾರ್ ಇವರೊಂದಿಗೆ ಕಾರ್ಯಾಚರಣೆ ನಡೆಸಿ ಶವವನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.

ಪೊಲೀಸ್ ಠಾಣಾಧಿಕಾರಿಗಳ ಉಪಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮಕ್ಕಾಗಿ ಶವವನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

Related posts

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!