July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು(ಡಿ .10) ಬೆಳಿಗ್ಗೆ ಪತ್ತೆಯಾಗಿದೆ.

ಜನರು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಶವ ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು ಪೊಲೀಸರು ಉಜಿರೆ ಘಟಕ ಪ್ರತಿನಿಧಿ ರವೀಂದ್ರ ಇವರಿಗೆ ಬೆಳಿಗ್ಗೆ 5.30 ರ ವೇಳೆಗೆ ಫೋನ್ ಕರೆ ಮಾಡಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿದ ಇವರು ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಾದ ಶಿಶಿಲ-ಅರಿಸಿನಮಕ್ಕಿ ಘಟಕದ ಅವಿನಾಶ್ ಬಿಡೆ, ಉಜಿರೆ ಘಟಕದ ರಾಘವೇಂದ್ರ, ಶಶಿಕುಮಾರ್ ಇವರೊಂದಿಗೆ ಕಾರ್ಯಾಚರಣೆ ನಡೆಸಿ ಶವವನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.

ಪೊಲೀಸ್ ಠಾಣಾಧಿಕಾರಿಗಳ ಉಪಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮಕ್ಕಾಗಿ ಶವವನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

Related posts

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!