25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು(ಡಿ .10) ಬೆಳಿಗ್ಗೆ ಪತ್ತೆಯಾಗಿದೆ.

ಜನರು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಶವ ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು ಪೊಲೀಸರು ಉಜಿರೆ ಘಟಕ ಪ್ರತಿನಿಧಿ ರವೀಂದ್ರ ಇವರಿಗೆ ಬೆಳಿಗ್ಗೆ 5.30 ರ ವೇಳೆಗೆ ಫೋನ್ ಕರೆ ಮಾಡಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿದ ಇವರು ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಾದ ಶಿಶಿಲ-ಅರಿಸಿನಮಕ್ಕಿ ಘಟಕದ ಅವಿನಾಶ್ ಬಿಡೆ, ಉಜಿರೆ ಘಟಕದ ರಾಘವೇಂದ್ರ, ಶಶಿಕುಮಾರ್ ಇವರೊಂದಿಗೆ ಕಾರ್ಯಾಚರಣೆ ನಡೆಸಿ ಶವವನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.

ಪೊಲೀಸ್ ಠಾಣಾಧಿಕಾರಿಗಳ ಉಪಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮಕ್ಕಾಗಿ ಶವವನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

Related posts

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya
error: Content is protected !!