September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

ಬೆಳಾಲು:ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮವು ಡಿ.10 ರಂದು ಬೆಳಾಲು ಪೆರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉಜಿರೆ ಶ್ರೀ ಧ.ಮಂ. ಕಾಲೇಜು ಪ್ರಾಂಶುಪಾಲರು ಡಾ. ಬಿ.ಎ ಕುಮಾರ ಹೆಗ್ಡೆ ಉದ್ಘಾಟಿಸಿದರು. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಚಾಲಕ ಕೆ.ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಶಾಲೆಯ ಮೇಲ್ಚಾವಣಿಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಮಾತನಾಡಿ ಶಾಲೆಯ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ರೂ 10 ಲಕ್ಷ ಹೆಚ್ಚುವರಿ ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದರು. ಶಾಸಕರನ್ನು ಶಾಲೆಯ ವತಿಯಿಂದ ಗೌರವಿಸಿ,ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳಾಲು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಮೀನಂದೇಲು ಸ್ಟೋರ್ ಮಾಲಕ ಜಯಣ್ಣ ಮೀನಂದೇಲು, ಬೆಳ್ತಂಗಡಿ ವಕೀಲರು ಬಿ.ಕೆ ಧನಂಜಯ್ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಅನಂತ ಭಟ್ ಮಚ್ಚಿಮಲೆ, ಜಿ‌.ಪಂಮಾಜಿ ಸದಸ್ಯ ಕೊರಗಪ್ಪ ನಾಯ್ಕ್,ಸಿ.ಆರ್.ಪಿ ಪ್ರತಿಮಾ,ಬೆಲಾಲು ಗ್ರಾ.ಪಂ ಸದಸ್ಯರಾದ ಸುರೇಂದ್ರ ಗೌಡ ಸುರುಳಿ,ಸತೀಶ್ ಸತೀಶ್ ಗೌಡ ಎಳ್ಳುಗದ್ದೆ,ಕೃಷ್ಣಯ್ಯ ಆಚಾರ್ಯ,ಶ್ರೀಮತಿ ಯಶೋಧ,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಂತೋಷ್ ಮಡಿವಾಳ, ಶಾಲಾ ನಾಯಕ ಹೇಮಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು.ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಸ್ವಾಗತಿಸಿದರು. ಯೋಜನೆಯ ಅಧಿಕಾರಿ ಗಿರೀಶ್, ಶಿಕ್ಷಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಮ್ಯಾಟ್ರಿಮೋನಿ ಆ್ಯಪ್‌ ಮೂಲಕ  ಪರಿಚಯವಾದ ಯುವತಿಯಿಂದ ಕೊಯ್ಯೂರಿನ ಉದ್ಯಮಿಗೆ ರೂ.87 ಲಕ್ಷ ವಂಚನೆ: ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya
error: Content is protected !!