23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರು ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್‌ನ ಸ್ಥಾಪಕರು ಹಾಗೂ ವಿದ್ವಾಂಸರಾದ ಡಾ. ಗುರುರಾಜ ಕರ್ಜಗಿ ಉದ್ಘಾಟಿಸಿದರು.


ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಸಿದ್ಧಗಂಗಾ ಮಠ ತುಮಕೂರಿನ ಪೀಠಾಧಿಪತಿಗಳಾದ ಶ್ರೀ ಸಿದ್ಧಲಿಂಗ ಸ್ವಾಮಿಗಳು ವಹಿಸಿದ್ದರು.
ಭಾರತ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿಗಳು, ಲೇಖಕರಾದ ಡಾ. ಎಂ. ಆರ್ ವೆಂಕಟೇಶ್, ವಿಭು ಅಕಾಡೆಮಿ ಬೆಂಗಳೂರಿನ ಸಂಸ್ಥಾಪಕ ಮುಖ್ಯಸ್ಥರಾದ ಡಾ. ವಿ.ಬಿ ಆರತಿ, ಬಸವಶಾಂತಿ ಪ್ರಶಸ್ತಿ ಪುರಸ್ಕೃತ ವಾಗ್ಮಿ ಮಹ್ಮದಗೌಸ ರ. ಹವಾಲ್ದಾರ ಉಪನ್ಯಾಸ ನೀಡಿದರು.

ಉಪನ್ಯಾಸಕ ಸುನೀಲ್ ಪಂಡಿತ್, ಶ್ರೀಮತಿ ಶ್ರದ್ಧಾ ಅಮಿತ್ ಸನ್ಮಾನ ಪತ್ರ ವಾಚಿಸಿದರು. ಭೈರವೇಶ್ವರ ಪುರಾಣ ಗ್ರಂಥವನ್ನು ಸ್ವಾಮೀಜಿ ಲೋಕಾರ್ಪಣೆ ಮಾಡಿದರು. ಡಿ. ಸುರೇಂದ್ರ ಕುಮಾರ್ ಉಪನ್ಯಾಸಕರನ್ನು ಸನ್ಮಾನಿಸಿದರು.

ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ವಂದಿಸಿದರು. ಉಪನ್ಯಾಸಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.


ರಾತ್ರಿ ಶ್ರೀಮತಿ ಅನುರಾಧಾ ವಿಕ್ರಾಂತ್ ಮತ್ತು ದೃಷ್ಟಿ ನೃತ್ಯ ಮೇಳ ಬೆಂಗಳೂರು ಇವರಿಂದ ನೃತ್ಯ ಸಮರ್ಪಣಂ ಕಾರ್ಯಕ್ರಮ ನಡೆಯಲಿದೆ.

Related posts

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!