27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರು ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್‌ನ ಸ್ಥಾಪಕರು ಹಾಗೂ ವಿದ್ವಾಂಸರಾದ ಡಾ. ಗುರುರಾಜ ಕರ್ಜಗಿ ಉದ್ಘಾಟಿಸಿದರು.


ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಸಿದ್ಧಗಂಗಾ ಮಠ ತುಮಕೂರಿನ ಪೀಠಾಧಿಪತಿಗಳಾದ ಶ್ರೀ ಸಿದ್ಧಲಿಂಗ ಸ್ವಾಮಿಗಳು ವಹಿಸಿದ್ದರು.
ಭಾರತ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿಗಳು, ಲೇಖಕರಾದ ಡಾ. ಎಂ. ಆರ್ ವೆಂಕಟೇಶ್, ವಿಭು ಅಕಾಡೆಮಿ ಬೆಂಗಳೂರಿನ ಸಂಸ್ಥಾಪಕ ಮುಖ್ಯಸ್ಥರಾದ ಡಾ. ವಿ.ಬಿ ಆರತಿ, ಬಸವಶಾಂತಿ ಪ್ರಶಸ್ತಿ ಪುರಸ್ಕೃತ ವಾಗ್ಮಿ ಮಹ್ಮದಗೌಸ ರ. ಹವಾಲ್ದಾರ ಉಪನ್ಯಾಸ ನೀಡಿದರು.

ಉಪನ್ಯಾಸಕ ಸುನೀಲ್ ಪಂಡಿತ್, ಶ್ರೀಮತಿ ಶ್ರದ್ಧಾ ಅಮಿತ್ ಸನ್ಮಾನ ಪತ್ರ ವಾಚಿಸಿದರು. ಭೈರವೇಶ್ವರ ಪುರಾಣ ಗ್ರಂಥವನ್ನು ಸ್ವಾಮೀಜಿ ಲೋಕಾರ್ಪಣೆ ಮಾಡಿದರು. ಡಿ. ಸುರೇಂದ್ರ ಕುಮಾರ್ ಉಪನ್ಯಾಸಕರನ್ನು ಸನ್ಮಾನಿಸಿದರು.

ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ವಂದಿಸಿದರು. ಉಪನ್ಯಾಸಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.


ರಾತ್ರಿ ಶ್ರೀಮತಿ ಅನುರಾಧಾ ವಿಕ್ರಾಂತ್ ಮತ್ತು ದೃಷ್ಟಿ ನೃತ್ಯ ಮೇಳ ಬೆಂಗಳೂರು ಇವರಿಂದ ನೃತ್ಯ ಸಮರ್ಪಣಂ ಕಾರ್ಯಕ್ರಮ ನಡೆಯಲಿದೆ.

Related posts

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!