25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

ಬಳಂಜ: ಎಲ್ಲಾ ಯುವಕರಿಗೆ ಸಮಾಜ ಸೇವೆ ಮಾಡುವ ಅವಕಾಶ ಸಿಗುವುದಿಲ್ಲ.ಅದಕ್ಕಾಗಿ ಸಮಾಜ ಸೇವೆಗೆಂದೆ ಹಲವಾರು ಸಂಘ ಸಂಸ್ಥೆಗಳು ಹಿರಿಯರ ಹೊಸ ಚಿಂತನೆಗಳೊಂದಿಗೆ ಪ್ರಾರಂಭವಾಗಿದ್ದು ಅದರೊಂದಿಗೆ ಕೈ ಜೋಡಿಸಿ ವಾರದ ಅಲ್ಪ ಸಮಯವನ್ನು ಸಮಾಜಸೇವೆಗೆ ಮೀಸಲಿರಿಸಿ ಆ ಮೂಲಕ ದೇಶ ಸೇವೆ ಮಾಡಬೇಕು.ಇದರಿಂದ ಸಮಾಜದ ಅಭಿವೃದ್ಧಿ ಸಹಕಾರಿಯಾಗಲಿದೆ ಎಂದು ಪ್ರಗತಿ ಪರ ಕೃಷಿಕ ಸತೀಶ್ ರೈ ಬಾದಡ್ಕ ಹೇಳಿದರು.

ಅವರು ಭಾನುವಾರ ಬಳಂಜ ಅಟ್ಲಾಜೆ ಸ.ಹಿ .ಪ್ರಾ ಶಾಲೆಯಲ್ಲಿ ಸರ್ವೋದಯ ಯುವಕ ಮಂಡಲ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ‌ ಕಾರ್ಯಕ್ರಮದಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಬಳಂಜ ಗ್ರಾಪಂ ಮಾಜಿ ಸದಸ್ಯ ಚಂದ್ರಶೇಖರ ಪಿ ಕೆ ಉದ್ಘಾಟಿಸಿ ಮಾತನಾಡಿ ಬಳಂಜ ಕಲೆ ಸಾಹಿತ್ಯಕ್ಕೆ ದೊಡ್ಡ ಕೊಡುಗೆ ನೀಡಿದ ಗ್ರಾ ಪಂ ಅಗಿದೆ.ಉಮಾಮಹೇಶ್ವರ ಯುವಕ ಮಂಡಲ ಅದೆಷ್ಟೋ ಪ್ರತಿಭಾನ್ವಿತ ತಂಡವನ್ನು ಹೊಂದಿತ್ತು.ಮತ್ತೆ ಇಂತಹ ಪ್ರತಿಭೆಗಳನ್ನು ಬೆಳೆಸುವಲ್ಲಿ ಸರ್ವೋದಯ ಪ್ರೆಂಡ್ಸ್ ಕ್ಲಬ್ ಮುಂದಾಗಬೇಕು ಎಂದರು.

ಪತ್ರಕರ್ತ ಮನೋಹರ್ ಬಳಂಜ ಪ್ರಾಸ್ತಾವಿಕ ಮಾತನಾಡಿ ಪ್ರತಿ ಯುವಕರಲ್ಲಿ ಸಮಾಜಸೇವೆಯ ತುಡಿತ ಇರಬೇಕು ಸಂಘ ಸಂಸ್ಥೆಗಳಲ್ಲಿ ಸಮಾಜದ ಹಿತಕ್ಕಾಗಿ ಶ್ರಮಿಸಬೇಕು.ಆಗ ಸಮಾಜ ಗುರುತಿಸುತ್ತದೆ.ಬಳಂಜ ಶಾಲೆಯು 75 ಸಂಭ್ರಮವನ್ನು ಆಚರಿಸಲು ಮುಂದಾಗಿದ್ದು ಈ ಶಾಲೆಯಲ್ಲಿ ಆಂಗ್ಲಮಾದ್ಯಮ ಶಿಕ್ಷಣದ ಜೊತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶವಿದೆ.ಸರ್ವೋದಯದ ಯುವಕರು ಸಮಾಜಸೇವೆಯ ಜೊತೆ ಬಳಂಜ ಶಾಲೆಯ ಅಮೃತ ಮಹೋತ್ಸವಕ್ಕೆ ಸಂಪೂರ್ಣ ಸಹಕರಿಸಬೇಕು ಎಂದರು.

ಖ್ಯಾತ ಚಲನ ಚಿತ್ರ ನಿರ್ದೇಶಕ ವಿನು ಬಳಂಜ,ಬಳಂಜ ಗ್ರಾ ಪಂ ಮಾಜಿ ಅದ್ಯಕ್ಷೆ ರತ್ನ ಶುಭಹಾರೈಸಿದರು.

ನೂತನ ಅದ್ಯಕ್ಷ ಸುರೇಶ್ ಹೇವ,ಕಾರ್ಯದರ್ಶಿ ಪ್ರಣಮ್ ಶೆಟ್ಟಿ,ಉಪಾಧ್ಯಕ್ಷ ಜಗದೀಶ್, ಜೊತೆ ಕಾರ್ಯದರ್ಶಿ ಪ್ರಶಾಂತ್ ಕಜೆಕೋಡಿ,ಕ್ರೀಡಾ ಕಾರ್ಯದರ್ಶಿ ಲತೇಶ್ ಪೆರಾಜೆ.ನಿಕಟಪೂರ್ವ ಅದ್ಯಕ್ಷ ಯಶೋಧರ ಶೆಟ್ಟಿ ,ಶಾಲಾಭಿವೃದ್ದಿ ಸಮಿತಿ ಅದ್ಯಕ್ಷ ಜಗದೀಶ್ ಕೊಂಗುಲ,ಚಿತ್ರನ್ ಕೊಂಗುಲ, ಮುಖ್ಯೋಪಾಧ್ಯಾಯ ಪ್ರಮೋದ್ ಉಪಸ್ಥಿತರಿದ್ದರು.

ಬ್ರಹ್ಮಶ್ರಿ ಕುಣಿತಾ ಭಜನಾ ಮಂಡಳಿ ಇದರ ಸಂಚಾಲಕ ಹರೀಶ್ ವೈ ಸ್ವಾಗತಿಸಿ ನಿರೂಪಿಸಿದರು.ನಿತೀನ್ ಶೆಟ್ಟಿ ವಂದಿಸಿದರು.

Related posts

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya
error: Content is protected !!