23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

ಬಳಂಜ: ಎಲ್ಲಾ ಯುವಕರಿಗೆ ಸಮಾಜ ಸೇವೆ ಮಾಡುವ ಅವಕಾಶ ಸಿಗುವುದಿಲ್ಲ.ಅದಕ್ಕಾಗಿ ಸಮಾಜ ಸೇವೆಗೆಂದೆ ಹಲವಾರು ಸಂಘ ಸಂಸ್ಥೆಗಳು ಹಿರಿಯರ ಹೊಸ ಚಿಂತನೆಗಳೊಂದಿಗೆ ಪ್ರಾರಂಭವಾಗಿದ್ದು ಅದರೊಂದಿಗೆ ಕೈ ಜೋಡಿಸಿ ವಾರದ ಅಲ್ಪ ಸಮಯವನ್ನು ಸಮಾಜಸೇವೆಗೆ ಮೀಸಲಿರಿಸಿ ಆ ಮೂಲಕ ದೇಶ ಸೇವೆ ಮಾಡಬೇಕು.ಇದರಿಂದ ಸಮಾಜದ ಅಭಿವೃದ್ಧಿ ಸಹಕಾರಿಯಾಗಲಿದೆ ಎಂದು ಪ್ರಗತಿ ಪರ ಕೃಷಿಕ ಸತೀಶ್ ರೈ ಬಾದಡ್ಕ ಹೇಳಿದರು.

ಅವರು ಭಾನುವಾರ ಬಳಂಜ ಅಟ್ಲಾಜೆ ಸ.ಹಿ .ಪ್ರಾ ಶಾಲೆಯಲ್ಲಿ ಸರ್ವೋದಯ ಯುವಕ ಮಂಡಲ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ‌ ಕಾರ್ಯಕ್ರಮದಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಬಳಂಜ ಗ್ರಾಪಂ ಮಾಜಿ ಸದಸ್ಯ ಚಂದ್ರಶೇಖರ ಪಿ ಕೆ ಉದ್ಘಾಟಿಸಿ ಮಾತನಾಡಿ ಬಳಂಜ ಕಲೆ ಸಾಹಿತ್ಯಕ್ಕೆ ದೊಡ್ಡ ಕೊಡುಗೆ ನೀಡಿದ ಗ್ರಾ ಪಂ ಅಗಿದೆ.ಉಮಾಮಹೇಶ್ವರ ಯುವಕ ಮಂಡಲ ಅದೆಷ್ಟೋ ಪ್ರತಿಭಾನ್ವಿತ ತಂಡವನ್ನು ಹೊಂದಿತ್ತು.ಮತ್ತೆ ಇಂತಹ ಪ್ರತಿಭೆಗಳನ್ನು ಬೆಳೆಸುವಲ್ಲಿ ಸರ್ವೋದಯ ಪ್ರೆಂಡ್ಸ್ ಕ್ಲಬ್ ಮುಂದಾಗಬೇಕು ಎಂದರು.

ಪತ್ರಕರ್ತ ಮನೋಹರ್ ಬಳಂಜ ಪ್ರಾಸ್ತಾವಿಕ ಮಾತನಾಡಿ ಪ್ರತಿ ಯುವಕರಲ್ಲಿ ಸಮಾಜಸೇವೆಯ ತುಡಿತ ಇರಬೇಕು ಸಂಘ ಸಂಸ್ಥೆಗಳಲ್ಲಿ ಸಮಾಜದ ಹಿತಕ್ಕಾಗಿ ಶ್ರಮಿಸಬೇಕು.ಆಗ ಸಮಾಜ ಗುರುತಿಸುತ್ತದೆ.ಬಳಂಜ ಶಾಲೆಯು 75 ಸಂಭ್ರಮವನ್ನು ಆಚರಿಸಲು ಮುಂದಾಗಿದ್ದು ಈ ಶಾಲೆಯಲ್ಲಿ ಆಂಗ್ಲಮಾದ್ಯಮ ಶಿಕ್ಷಣದ ಜೊತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶವಿದೆ.ಸರ್ವೋದಯದ ಯುವಕರು ಸಮಾಜಸೇವೆಯ ಜೊತೆ ಬಳಂಜ ಶಾಲೆಯ ಅಮೃತ ಮಹೋತ್ಸವಕ್ಕೆ ಸಂಪೂರ್ಣ ಸಹಕರಿಸಬೇಕು ಎಂದರು.

ಖ್ಯಾತ ಚಲನ ಚಿತ್ರ ನಿರ್ದೇಶಕ ವಿನು ಬಳಂಜ,ಬಳಂಜ ಗ್ರಾ ಪಂ ಮಾಜಿ ಅದ್ಯಕ್ಷೆ ರತ್ನ ಶುಭಹಾರೈಸಿದರು.

ನೂತನ ಅದ್ಯಕ್ಷ ಸುರೇಶ್ ಹೇವ,ಕಾರ್ಯದರ್ಶಿ ಪ್ರಣಮ್ ಶೆಟ್ಟಿ,ಉಪಾಧ್ಯಕ್ಷ ಜಗದೀಶ್, ಜೊತೆ ಕಾರ್ಯದರ್ಶಿ ಪ್ರಶಾಂತ್ ಕಜೆಕೋಡಿ,ಕ್ರೀಡಾ ಕಾರ್ಯದರ್ಶಿ ಲತೇಶ್ ಪೆರಾಜೆ.ನಿಕಟಪೂರ್ವ ಅದ್ಯಕ್ಷ ಯಶೋಧರ ಶೆಟ್ಟಿ ,ಶಾಲಾಭಿವೃದ್ದಿ ಸಮಿತಿ ಅದ್ಯಕ್ಷ ಜಗದೀಶ್ ಕೊಂಗುಲ,ಚಿತ್ರನ್ ಕೊಂಗುಲ, ಮುಖ್ಯೋಪಾಧ್ಯಾಯ ಪ್ರಮೋದ್ ಉಪಸ್ಥಿತರಿದ್ದರು.

ಬ್ರಹ್ಮಶ್ರಿ ಕುಣಿತಾ ಭಜನಾ ಮಂಡಳಿ ಇದರ ಸಂಚಾಲಕ ಹರೀಶ್ ವೈ ಸ್ವಾಗತಿಸಿ ನಿರೂಪಿಸಿದರು.ನಿತೀನ್ ಶೆಟ್ಟಿ ವಂದಿಸಿದರು.

Related posts

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಬೆಹರೆನ್ ದೇಶದ ಬಿಲ್ಲವ ವೈಭವ ಕಾರ್ಯಕ್ರಮದಲ್ಲಿ ರಕ್ಷಿತ್ ಶಿವರಾಮ್ ರವರಿಗೆ ಸನ್ಮಾನ

Suddi Udaya
error: Content is protected !!