26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

ಬಳಂಜ: ಎಲ್ಲಾ ಯುವಕರಿಗೆ ಸಮಾಜ ಸೇವೆ ಮಾಡುವ ಅವಕಾಶ ಸಿಗುವುದಿಲ್ಲ.ಅದಕ್ಕಾಗಿ ಸಮಾಜ ಸೇವೆಗೆಂದೆ ಹಲವಾರು ಸಂಘ ಸಂಸ್ಥೆಗಳು ಹಿರಿಯರ ಹೊಸ ಚಿಂತನೆಗಳೊಂದಿಗೆ ಪ್ರಾರಂಭವಾಗಿದ್ದು ಅದರೊಂದಿಗೆ ಕೈ ಜೋಡಿಸಿ ವಾರದ ಅಲ್ಪ ಸಮಯವನ್ನು ಸಮಾಜಸೇವೆಗೆ ಮೀಸಲಿರಿಸಿ ಆ ಮೂಲಕ ದೇಶ ಸೇವೆ ಮಾಡಬೇಕು.ಇದರಿಂದ ಸಮಾಜದ ಅಭಿವೃದ್ಧಿ ಸಹಕಾರಿಯಾಗಲಿದೆ ಎಂದು ಪ್ರಗತಿ ಪರ ಕೃಷಿಕ ಸತೀಶ್ ರೈ ಬಾದಡ್ಕ ಹೇಳಿದರು.

ಅವರು ಭಾನುವಾರ ಬಳಂಜ ಅಟ್ಲಾಜೆ ಸ.ಹಿ .ಪ್ರಾ ಶಾಲೆಯಲ್ಲಿ ಸರ್ವೋದಯ ಯುವಕ ಮಂಡಲ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ‌ ಕಾರ್ಯಕ್ರಮದಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಬಳಂಜ ಗ್ರಾಪಂ ಮಾಜಿ ಸದಸ್ಯ ಚಂದ್ರಶೇಖರ ಪಿ ಕೆ ಉದ್ಘಾಟಿಸಿ ಮಾತನಾಡಿ ಬಳಂಜ ಕಲೆ ಸಾಹಿತ್ಯಕ್ಕೆ ದೊಡ್ಡ ಕೊಡುಗೆ ನೀಡಿದ ಗ್ರಾ ಪಂ ಅಗಿದೆ.ಉಮಾಮಹೇಶ್ವರ ಯುವಕ ಮಂಡಲ ಅದೆಷ್ಟೋ ಪ್ರತಿಭಾನ್ವಿತ ತಂಡವನ್ನು ಹೊಂದಿತ್ತು.ಮತ್ತೆ ಇಂತಹ ಪ್ರತಿಭೆಗಳನ್ನು ಬೆಳೆಸುವಲ್ಲಿ ಸರ್ವೋದಯ ಪ್ರೆಂಡ್ಸ್ ಕ್ಲಬ್ ಮುಂದಾಗಬೇಕು ಎಂದರು.

ಪತ್ರಕರ್ತ ಮನೋಹರ್ ಬಳಂಜ ಪ್ರಾಸ್ತಾವಿಕ ಮಾತನಾಡಿ ಪ್ರತಿ ಯುವಕರಲ್ಲಿ ಸಮಾಜಸೇವೆಯ ತುಡಿತ ಇರಬೇಕು ಸಂಘ ಸಂಸ್ಥೆಗಳಲ್ಲಿ ಸಮಾಜದ ಹಿತಕ್ಕಾಗಿ ಶ್ರಮಿಸಬೇಕು.ಆಗ ಸಮಾಜ ಗುರುತಿಸುತ್ತದೆ.ಬಳಂಜ ಶಾಲೆಯು 75 ಸಂಭ್ರಮವನ್ನು ಆಚರಿಸಲು ಮುಂದಾಗಿದ್ದು ಈ ಶಾಲೆಯಲ್ಲಿ ಆಂಗ್ಲಮಾದ್ಯಮ ಶಿಕ್ಷಣದ ಜೊತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶವಿದೆ.ಸರ್ವೋದಯದ ಯುವಕರು ಸಮಾಜಸೇವೆಯ ಜೊತೆ ಬಳಂಜ ಶಾಲೆಯ ಅಮೃತ ಮಹೋತ್ಸವಕ್ಕೆ ಸಂಪೂರ್ಣ ಸಹಕರಿಸಬೇಕು ಎಂದರು.

ಖ್ಯಾತ ಚಲನ ಚಿತ್ರ ನಿರ್ದೇಶಕ ವಿನು ಬಳಂಜ,ಬಳಂಜ ಗ್ರಾ ಪಂ ಮಾಜಿ ಅದ್ಯಕ್ಷೆ ರತ್ನ ಶುಭಹಾರೈಸಿದರು.

ನೂತನ ಅದ್ಯಕ್ಷ ಸುರೇಶ್ ಹೇವ,ಕಾರ್ಯದರ್ಶಿ ಪ್ರಣಮ್ ಶೆಟ್ಟಿ,ಉಪಾಧ್ಯಕ್ಷ ಜಗದೀಶ್, ಜೊತೆ ಕಾರ್ಯದರ್ಶಿ ಪ್ರಶಾಂತ್ ಕಜೆಕೋಡಿ,ಕ್ರೀಡಾ ಕಾರ್ಯದರ್ಶಿ ಲತೇಶ್ ಪೆರಾಜೆ.ನಿಕಟಪೂರ್ವ ಅದ್ಯಕ್ಷ ಯಶೋಧರ ಶೆಟ್ಟಿ ,ಶಾಲಾಭಿವೃದ್ದಿ ಸಮಿತಿ ಅದ್ಯಕ್ಷ ಜಗದೀಶ್ ಕೊಂಗುಲ,ಚಿತ್ರನ್ ಕೊಂಗುಲ, ಮುಖ್ಯೋಪಾಧ್ಯಾಯ ಪ್ರಮೋದ್ ಉಪಸ್ಥಿತರಿದ್ದರು.

ಬ್ರಹ್ಮಶ್ರಿ ಕುಣಿತಾ ಭಜನಾ ಮಂಡಳಿ ಇದರ ಸಂಚಾಲಕ ಹರೀಶ್ ವೈ ಸ್ವಾಗತಿಸಿ ನಿರೂಪಿಸಿದರು.ನಿತೀನ್ ಶೆಟ್ಟಿ ವಂದಿಸಿದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya
error: Content is protected !!