22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಹಳೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಲಗೋರಿ ಪಂದ್ಯಾಟ ಜರಗಿತು.

ಪಂದ್ಯಾಟಕ್ಕೆ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಚಾಲನೆ ನೀಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರು, ಉಪಾಧ್ಯಕ್ಷರಾದ ಶ್ರೀಮತಿ ವಸಂತಿ ಮಂಡಾಲು ರವರು ಉಪಸ್ಥಿತರಿದ್ದರು.

ಜಾನಪದ ಕ್ರೀಡೆಯಾಗಿರುವ ಲಗೋರಿಯನ್ನು ಪಂದ್ಯಾಟವಾಗಿ ಅಳವಡಿಸಿಕೊಂಡಿರುವ ಹಳೆ ವಿದ್ಯಾರ್ಥಿ ಸಂಘದ ಬಗ್ಗೆ ಬಹುವಾಗಿ ಮೆಚ್ಚುಗೆ ವ್ಯಕ್ತವಾಯಿತು.

ಪಂದ್ಯಾಟದಲ್ಲಿ ಅಂತಿಮವಾಗಿ ಸಂತೋಷ್ ಕನಿಕ್ಕಿಲ ತಂಡದವರು ಪ್ರಥಮ, ಶೇಖರ್ ಗೌಡ ಕೊಲ್ಲಿಮಾರು ತಂಡ ದ್ವಿತೀಯ ಹಾಗೂ ಸುರೇಶ್ ತಂಡದವರು ತೃತೀಯ ಸ್ಥಾನವನ್ನು ಪಡೆದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲ, ಕಾರ್ಯದರ್ಶಿಗಳಾದ ಮಹಮ್ಮದ್ ಶರೀಫ್ ಬೆಳಾಲು ರವರು ಕೂಟವನ್ನು ಸಂಯೋಜಿಸಿದರು. ಉಜಿರೆ ಶ್ರೀ ಧ ಮಂ ಕ್ರೀಡಾ ಸಂಘದವರು ಸ್ಪರ್ಧೆಯನ್ನು ನಿರ್ವಹಿಸಿದರು.

Related posts

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

‘ಗುರುಪೂರ್ಣಿಮೆ’ಯ ಮಹತ್ವ ಹಾಗೂ ಇತಿಹಾಸ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya
error: Content is protected !!