25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

ಬೆಳ್ತಂಗಡಿ: ಡಿ. 17 ರಂದು ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ ವಿವಿಧ ವೈವಿಧ್ಯಮಯ ಕಾಯ೯ಕ್ರಮಗಳೊಂದಿಗೆ ಜರುಗಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ನಾರಾಯಣ ಭಟ್ ಕಯ್ಯೂರು ಹೇಳಿದರು.


ಅವರು ಡಿ. 11ರಂದು‌ ಬೆಳ್ತಂಗಡಿ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,
ಹಿರಿಯರ ಜೀವನವು ಕಾಲಹರಣವಾಗದೇ ಆತ್ಮಗೌರವದೊಂದಿಗೆ ಅವರಲ್ಲಿರುವ ಇಚ್ಛಾ, ಕ್ರಿಯಾ ಮತ್ತು ಜ್ಞಾನ ಶಕ್ತಿಗಳು ಸಮಾಜಕ್ಕೆ ಬಳಕೆಯಾಗಬೇಕು ಮತ್ತು ನಿರಾಶೆಯನ್ನು ಬಿಟ್ಟು ಆಶಾವಾದವನ್ನು ಹೊಂದುವಂತಗಾಬೇಕು ಎಂಬ ಉದ್ದೇಶದಿಂದ ಪ್ರತಿಷ್ಠಾನವನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

50 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಪ್ರತಿಷ್ಠಾನದ ಸದಸ್ಯರಾಗಿ ತಮ್ಮ ಕ್ಷೇತ್ರದ ಅನುಭವಗಳನ್ನು ಹಂಚಿಕೊಳ್ಳಲು ಅವಕಾಶವಿದೆ. ಕಾಸರಗೋಡು ಮತ್ತು ದ.ಕ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪ್ರತಿಷ್ಠಾನದ ಘಟಕಗಳಿದ್ದು ಸೇವಾಕಾರ್ಯಗಳನ್ನು ನಡೆಸುತ್ತಿದೆ‌ ಎಂದು ವಿವರಿಸಿದರು.
2021 ಡಿ.18ರಲ್ಲಿ ಅಳಿಕೆಯ ಸತ್ಯಸಾಯಿ ವಿಹಾರದಲ್ಲಿ ಹಿರಿಯರ ಸಮಾವೇಶದೊಂದಿಗೆ ಉದ್ಘಾಟನೆಯಾದ ಈ ಪ್ರತಿಷ್ಠಾನದ ದ್ವಿತೀಯ ವಾರ್ಷಿಕೋತ್ಸವವು ಡಿ .17ರಂದು ಪೂರ್ವಾಹ್ನ ಗಂಟೆ 10 ರಿಂದ ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಜರಗಲಿದೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಲಿದ್ದಾರೆ .ಸೌತಡ್ಕ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ರಾವ್ ಯಂ. ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಧಾರ್ಮಿಕ ಪರಿಷತ್ತಿನ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ, ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ ಅತಿಥಿಗಳಾಗಿದ್ದು ಭಾ. ಜೀವ ವಿಮಾ ನಿಗಮದ ಬೆಳ್ತಂಗಡಿ ಬ್ರಾಂಚ್ ಮೇನೇಜರ್ ವಿ.ಎಸ್. ಕುಮಾರ್ ಇವರಿಂದ ವಿಶೇಷ ಉಪನ್ಯಾಸವಿರುತ್ತದೆ ಎಂದರು.


ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ:
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ರಾಜೇಂದ್ರ ಕಲ್ಲೂರಾಯ, ಕೆ. ಜಯರಾಮ ಶೆಟ್ಟಿ ಉಳ್ಳಾಲ ಮಾಜಿ ಶಾಸಕದ ಬಾಹುಬಲಿ ಪ್ರಸಾದ್ ಮೂಡಬಿದಿರೆ, ವಸಂತ ಸುವರ್ಣ ಬೆಳ್ತಂಗಡಿ, ಡಾ. ರಂಗಯ್ಯ ಸುಳ್ಯ, ರಾಜಮಣಿ ರಾಮಕು ಬಂಟ್ವಾಳ, ಮಧೂರು ಮೋಹನ ಕಲ್ಲೂರಾಯ, ಸುರೇಶ ಬೈಂದೂರ, ಉಮೇಶ ಶೆಣೈ ಯನ್. ಉಪ್ಪಿನಂಗಡಿ, ಬಿ.ಕೇಶವ ಶಬರಾಯ ಸೌತಡ್ಕ, ಯಂ. ವೈ. ರಾಮಕೃಷ್ಣ ಸೌತಡ್ಕ, ಶ್ರೀಮತಿ ವಿನೋದ ಕೆ. ಶೆಟ್ಟಿ ಸೌತಡ್ಕ, ಇವರಿಗೆ ಗೌರವಾರ್ಪಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪಟ್ಟಾಭಿರಾಮ ಸುಳ್ಯ ಇವರಿಂದ ಮಿಮಿಕ್ರಿ ಶ್ರೀ ಕಾಳಿಕಾಂಬಾ ಯಕ್ಷಗಾನ ಸಂಘ, ಉಪ್ಪಿನಂಗಡಿ ಇವರಿಂದ ರಾಜಸೂಯಧ್ವರ ತಾಳಮದ್ದಳೆ ಜರಗಲಿದೆ ಎಂದು ವಿವರಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಎಂ.ಜಯರಾಮ ಭಂಡಾರಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಸೀತಾರಾಮ್ ಶೆಟ್ಟಿ, ಸಂಚಾಲಕ ವಸಂತ ಸುವರ್ಣ, ಕಾಯ೯ಕಾರಿ ಸಮಿತಿ ಸದಸ್ಯ ವೇದವ್ಯಾಸ ಉಪಸ್ಥಿತರಿದ್ದರು.

Related posts

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya
error: Content is protected !!