ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

Updated on:

ಗೇರುಕಟ್ಟೆ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿಸೆಂಬರ್ 19 ರಂದು ನಡೆಯಲಿದ್ದು, ಡಿಸೆಂಬರ್ 7ರಂದು ನಾಮಪತ್ರ ಸಲ್ಲಿಸಿದರು.


ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಡಿಯಲ್ಲಿ ಮಾಜಿ ಅಧ್ಯಕ್ಷರಾದ ವಸಂತ ಮಜಲು ನೇತೃತ್ವದಲ್ಲಿ ಸಾಲಗಾರರ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತಾಯ, ಕುಶಲ ಗೌಡ, ಗೋಪಾಲ ಬನ, ಬಾಲಕೃಷ್ಣ ಬಿರ್ಮೊಟ್ಟು, ಪರಿಶಿಷ್ಟ ಜಾತಿ ಮೀಸಲು ಸ್ಥಾನದಲ್ಲಿ ಲೋಕೇಶ್ ನಾಳ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಲ್ಲಿ ಶೇಖರ್ ನಾಯ್ಕ, ಹಿಂದುಳಿದ ವರ್ಗ ಎ ಮೀಸಲು ಸ್ಥಾನದಲ್ಲಿ ಉದಿತ್, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಲ್ಲಿ ರಾಜಪ್ರಕಾಶ್, ಮಹಿಳಾ ಕ್ಷೇತ್ರದಲ್ಲಿ ಮಮತಾ ಆಲ್ವ, ಚಂದ್ರಾವತಿ, ಸಾಲಗಾರರಲ್ಲದ ಕ್ಷೇತ್ರದಲ್ಲಿ ಕೇಶವ ಸೇರಿದಂತೆ 12 ಮಂದಿ ನಾಮಪತ್ರ ಸಲ್ಲಿಸಿದರು.

Leave a Comment

error: Content is protected !!