24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕುವೆಟ್ಟು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ 69 ½ ಗ್ರಾಂ ತೂಕದ ಚಿನ್ನಾಭರಣ ಹಾಗೂ 40,000 ನಗದು ಹಣವನ್ನು ಕಳವು ಮಾಡಿದ ಘಟನೆ ನಡೆದಿದೆ.

ಬೆಳ್ತಂಗಡಿ ಕುವೆಟ್ಟು ನಿವಾಸಿ ಸುಲೈಮಾನ್ (56ವ) ಎಂಬವರ ದೂರಿನಂತೆ, ಡಿ.9 ರಂದು ಸಂಜೆಯಿಂದ ಡಿ.10 ರ ಸಂಜೆಯ ಅವಧಿಯಲ್ಲಿ ಸುಲೈಮಾನ್ ಮನೆಯಲ್ಲಿ ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ ಬೆಡ್ ರೂಮಿನ ಗಾಡ್ರೇಜಿನ ಬಾಗಿಲು ಮುರಿದು ಒಟ್ಟು 69 ½ ಗ್ರಾಂ ತೂಕದ ಚಿನ್ನಾಭರಣ ಹಾಗೂ 40,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಕಳುವಾದ ಒಟ್ಟು ಮೌಲ್ಯ 3,87,500 ಆಗಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 119/2023 ಕಲಂ;457,454,380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Related posts

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

“ವಿಮಾ ಗ್ರಾಮ” ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya
error: Content is protected !!