23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕುವೆಟ್ಟು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ 69 ½ ಗ್ರಾಂ ತೂಕದ ಚಿನ್ನಾಭರಣ ಹಾಗೂ 40,000 ನಗದು ಹಣವನ್ನು ಕಳವು ಮಾಡಿದ ಘಟನೆ ನಡೆದಿದೆ.

ಬೆಳ್ತಂಗಡಿ ಕುವೆಟ್ಟು ನಿವಾಸಿ ಸುಲೈಮಾನ್ (56ವ) ಎಂಬವರ ದೂರಿನಂತೆ, ಡಿ.9 ರಂದು ಸಂಜೆಯಿಂದ ಡಿ.10 ರ ಸಂಜೆಯ ಅವಧಿಯಲ್ಲಿ ಸುಲೈಮಾನ್ ಮನೆಯಲ್ಲಿ ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ ಬೆಡ್ ರೂಮಿನ ಗಾಡ್ರೇಜಿನ ಬಾಗಿಲು ಮುರಿದು ಒಟ್ಟು 69 ½ ಗ್ರಾಂ ತೂಕದ ಚಿನ್ನಾಭರಣ ಹಾಗೂ 40,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಕಳುವಾದ ಒಟ್ಟು ಮೌಲ್ಯ 3,87,500 ಆಗಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 119/2023 ಕಲಂ;457,454,380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya
error: Content is protected !!