25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

ಸುಲ್ಕೇರಿ: ಶ್ರೀ ಮಹಾಮಾಯಿ ಸಭಾಭವನ ಭಂಡಾರಿಗೋಳಿ ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮವು ಡಿ.9 ರಂದು ನಡೆಯಿತು.

ಸಮಾರಂಭದಲ್ಲಿ ಅಂಗನವಾಡಿ ಸಹಾಯಕಿ ಶ್ರೀಮತಿ ಸುಂದರಿಯವರನ್ನು ಸನ್ಮಾನಿಸಲಾಯಿತು.

ಶಾಲಾ ಮಕ್ಕಳಿಗೆ ಏರ್ಪಡಿಸಿದ ವಿವಿಧ ಸ್ಪರ್ಧೆಗಳ ಬಹುಮಾನ ಹಾಗೂ ನಾಲ್ಕು ಮಂದಿ ಬಡವರಿಗೆ ಅಕ್ಕಿ ವಿತರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರವಿ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರಾಂತೀಯ ಅಧ್ಯಕ್ಷರಾದ ಹೆರಾಲ್ಡ್ ತಾವ್ರೊ ವಲಯ ಅಧ್ಯಕ್ಷರಾದ ಎಂ ಕೆ ದಿನೇಶ್ ಹಾಗೂ ವಿವಿಧ ಕ್ಲಬ್ ಅಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ, ಜೊಸ್ಸಿ ಮೆನೇಜಸ್ ರೋಷನ್ ಹಾಗೂ ನಿರಂಜನ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ವಲಯ 2 ಅಧ್ಯಕ್ಷರಾದ ಶ್ರೀಮತಿ ಪ್ರತಿಭಾ ಹೆಬ್ಬಾರ್, ಸುಲ್ಕೇರಿ ಕ್ಲಬ್ ನ ಸ್ಥಾಪಕ ಅಧ್ಯಕ್ಷರಾದ ಲಯನ್ ಸುಂದರ ಶೆಟ್ಟಿ, ಕೋಶಾಧಿಕಾರಿ ಹರೀಶ್ ಪೂಜಾರಿ ಹಾಗೂ ಕಾರ್ಯದರ್ಶಿ ಸುರೇಶ್ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಲಯನ್ ವಿಶ್ವನಾಥ ಶೆಟ್ಟಿ ಹಾಗೂ ಲಯನ್ ಕೆ ವಸಂತ ರಾವ್ ನೆರವೇರಿಸಿದರು.

Related posts

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya
error: Content is protected !!