38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

ಸುಲ್ಕೇರಿ: ಶ್ರೀ ಮಹಾಮಾಯಿ ಸಭಾಭವನ ಭಂಡಾರಿಗೋಳಿ ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮವು ಡಿ.9 ರಂದು ನಡೆಯಿತು.

ಸಮಾರಂಭದಲ್ಲಿ ಅಂಗನವಾಡಿ ಸಹಾಯಕಿ ಶ್ರೀಮತಿ ಸುಂದರಿಯವರನ್ನು ಸನ್ಮಾನಿಸಲಾಯಿತು.

ಶಾಲಾ ಮಕ್ಕಳಿಗೆ ಏರ್ಪಡಿಸಿದ ವಿವಿಧ ಸ್ಪರ್ಧೆಗಳ ಬಹುಮಾನ ಹಾಗೂ ನಾಲ್ಕು ಮಂದಿ ಬಡವರಿಗೆ ಅಕ್ಕಿ ವಿತರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರವಿ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರಾಂತೀಯ ಅಧ್ಯಕ್ಷರಾದ ಹೆರಾಲ್ಡ್ ತಾವ್ರೊ ವಲಯ ಅಧ್ಯಕ್ಷರಾದ ಎಂ ಕೆ ದಿನೇಶ್ ಹಾಗೂ ವಿವಿಧ ಕ್ಲಬ್ ಅಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ, ಜೊಸ್ಸಿ ಮೆನೇಜಸ್ ರೋಷನ್ ಹಾಗೂ ನಿರಂಜನ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ವಲಯ 2 ಅಧ್ಯಕ್ಷರಾದ ಶ್ರೀಮತಿ ಪ್ರತಿಭಾ ಹೆಬ್ಬಾರ್, ಸುಲ್ಕೇರಿ ಕ್ಲಬ್ ನ ಸ್ಥಾಪಕ ಅಧ್ಯಕ್ಷರಾದ ಲಯನ್ ಸುಂದರ ಶೆಟ್ಟಿ, ಕೋಶಾಧಿಕಾರಿ ಹರೀಶ್ ಪೂಜಾರಿ ಹಾಗೂ ಕಾರ್ಯದರ್ಶಿ ಸುರೇಶ್ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಲಯನ್ ವಿಶ್ವನಾಥ ಶೆಟ್ಟಿ ಹಾಗೂ ಲಯನ್ ಕೆ ವಸಂತ ರಾವ್ ನೆರವೇರಿಸಿದರು.

Related posts

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya
error: Content is protected !!