September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

ಸುಲ್ಕೇರಿ: ಶ್ರೀ ಮಹಾಮಾಯಿ ಸಭಾಭವನ ಭಂಡಾರಿಗೋಳಿ ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮವು ಡಿ.9 ರಂದು ನಡೆಯಿತು.

ಸಮಾರಂಭದಲ್ಲಿ ಅಂಗನವಾಡಿ ಸಹಾಯಕಿ ಶ್ರೀಮತಿ ಸುಂದರಿಯವರನ್ನು ಸನ್ಮಾನಿಸಲಾಯಿತು.

ಶಾಲಾ ಮಕ್ಕಳಿಗೆ ಏರ್ಪಡಿಸಿದ ವಿವಿಧ ಸ್ಪರ್ಧೆಗಳ ಬಹುಮಾನ ಹಾಗೂ ನಾಲ್ಕು ಮಂದಿ ಬಡವರಿಗೆ ಅಕ್ಕಿ ವಿತರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರವಿ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರಾಂತೀಯ ಅಧ್ಯಕ್ಷರಾದ ಹೆರಾಲ್ಡ್ ತಾವ್ರೊ ವಲಯ ಅಧ್ಯಕ್ಷರಾದ ಎಂ ಕೆ ದಿನೇಶ್ ಹಾಗೂ ವಿವಿಧ ಕ್ಲಬ್ ಅಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ, ಜೊಸ್ಸಿ ಮೆನೇಜಸ್ ರೋಷನ್ ಹಾಗೂ ನಿರಂಜನ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ವಲಯ 2 ಅಧ್ಯಕ್ಷರಾದ ಶ್ರೀಮತಿ ಪ್ರತಿಭಾ ಹೆಬ್ಬಾರ್, ಸುಲ್ಕೇರಿ ಕ್ಲಬ್ ನ ಸ್ಥಾಪಕ ಅಧ್ಯಕ್ಷರಾದ ಲಯನ್ ಸುಂದರ ಶೆಟ್ಟಿ, ಕೋಶಾಧಿಕಾರಿ ಹರೀಶ್ ಪೂಜಾರಿ ಹಾಗೂ ಕಾರ್ಯದರ್ಶಿ ಸುರೇಶ್ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಲಯನ್ ವಿಶ್ವನಾಥ ಶೆಟ್ಟಿ ಹಾಗೂ ಲಯನ್ ಕೆ ವಸಂತ ರಾವ್ ನೆರವೇರಿಸಿದರು.

Related posts

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!