27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

ಬೆಳ್ತಂಗಡಿ : ರಹ್ಮಾನಿಯಾ ಜುಮಾ ಮಸೀದಿ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಂಗಸಂಸ್ಥೆಯಾದ ಮಸ್ಜಿದುಲ್ ಹಿದಾಯ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ದಿಡುಪೆ ಆಡಳಿತ ಸಮಿತಿ ಮಹಾಸಭೆಯು ಕಾಜೂರು ದರ್ಗಾ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಕಾಜೂರು ಇವರ ಸಭಾಧ್ಯಕ್ಷತೆಯಲ್ಲಿ ದಿಡುಪೆ ಮದರಸ ಹಾಲ್ ನಲ್ಲಿ ನಡೆಯಿತು.


ಸ್ಥಳೀಯ ಇಮಾಂ ಶರೀಫ್ ಸಖಾಫಿ ಉಜಿರ್ಬೆಟ್ಟು ದುಆ ಹಾಗೂ ಉದ್ಘಾಟನೆ ಮಾಡಿದರು.
ಕಾಜೂರು ದರ್ಗಾ ಶರೀಫ್ ಆಡಳಿತ ಸಮಿತಿ ಪ್ರದಾನ ಕಾರ್ಯದರ್ಶಿ, ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಜೆ.ಎಚ್ ಅಬೂಬಕರ್ ಸಿದ್ದೀಕ್ ಕಾಜೂರು , ಕೋಶಾಧಿಕಾರಿ ಮುಹಮ್ಮದ್ ಕಮಾಲ್ ಕಾಜೂರು ಇವರ ಗೌರವ ಉಪಸ್ಥಿಯೊಂದಿಗೆ ನಡೆದ ಮಹಾಸಭೆಯಲ್ಲಿ ಹಿಂದಿನ ಸಮಿತಿಯ ಕಾರ್ಯ ವೈಕರ್ಯಗಳನ್ನು ಚರ್ಚಿಸಿ ಸಭೆಯ ಸರ್ವಾನುಮತದ ಅಭಿಪ್ರಾಯ ಮೇರೆಗೆ ಈ ಹಿಂದಿನ ಸಮಿತಿಯನ್ನೇ ಪುನರಾಯ್ಕೆ ಮಾಡಿದ ಪ್ರಕಾರ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ದಿಡುಪೆ, ಪ್ರಧಾನ ಕಾರ್ಯದರ್ಶಿಯಾಗಿ ಎ.ಯು ಮುಹಮ್ಮದ್ ಅಲಿ ಅಶ್ವತ್ತಡಿ, ಕೋಶಾಧಿಕಾರಿಯಾಗಿ ಎನ್ ಎ ಪುತ್ತಬ್ಬ ಅಡ್ಕ , ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಪಯ್ಯೆ , ಕಾರ್ಯದರ್ಶಿಯಾಗಿ ನಿಝಾಮುದ್ದೀನ್ ಅಜಲ್ದಕ್ಕಿ ಸಹಿತ ವಿರುವ 11 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರು ವಂದಿಸಿದರು.

Related posts

ಕಲ್ಮಂಜ ಲಕ್ಷ್ಮಣ ಭಂಡಾರಿ ನಿಧನ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya
error: Content is protected !!