July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

ಬೆಳ್ತಂಗಡಿ : ರಹ್ಮಾನಿಯಾ ಜುಮಾ ಮಸೀದಿ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಂಗಸಂಸ್ಥೆಯಾದ ಮಸ್ಜಿದುಲ್ ಹಿದಾಯ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ದಿಡುಪೆ ಆಡಳಿತ ಸಮಿತಿ ಮಹಾಸಭೆಯು ಕಾಜೂರು ದರ್ಗಾ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಕಾಜೂರು ಇವರ ಸಭಾಧ್ಯಕ್ಷತೆಯಲ್ಲಿ ದಿಡುಪೆ ಮದರಸ ಹಾಲ್ ನಲ್ಲಿ ನಡೆಯಿತು.


ಸ್ಥಳೀಯ ಇಮಾಂ ಶರೀಫ್ ಸಖಾಫಿ ಉಜಿರ್ಬೆಟ್ಟು ದುಆ ಹಾಗೂ ಉದ್ಘಾಟನೆ ಮಾಡಿದರು.
ಕಾಜೂರು ದರ್ಗಾ ಶರೀಫ್ ಆಡಳಿತ ಸಮಿತಿ ಪ್ರದಾನ ಕಾರ್ಯದರ್ಶಿ, ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಜೆ.ಎಚ್ ಅಬೂಬಕರ್ ಸಿದ್ದೀಕ್ ಕಾಜೂರು , ಕೋಶಾಧಿಕಾರಿ ಮುಹಮ್ಮದ್ ಕಮಾಲ್ ಕಾಜೂರು ಇವರ ಗೌರವ ಉಪಸ್ಥಿಯೊಂದಿಗೆ ನಡೆದ ಮಹಾಸಭೆಯಲ್ಲಿ ಹಿಂದಿನ ಸಮಿತಿಯ ಕಾರ್ಯ ವೈಕರ್ಯಗಳನ್ನು ಚರ್ಚಿಸಿ ಸಭೆಯ ಸರ್ವಾನುಮತದ ಅಭಿಪ್ರಾಯ ಮೇರೆಗೆ ಈ ಹಿಂದಿನ ಸಮಿತಿಯನ್ನೇ ಪುನರಾಯ್ಕೆ ಮಾಡಿದ ಪ್ರಕಾರ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ದಿಡುಪೆ, ಪ್ರಧಾನ ಕಾರ್ಯದರ್ಶಿಯಾಗಿ ಎ.ಯು ಮುಹಮ್ಮದ್ ಅಲಿ ಅಶ್ವತ್ತಡಿ, ಕೋಶಾಧಿಕಾರಿಯಾಗಿ ಎನ್ ಎ ಪುತ್ತಬ್ಬ ಅಡ್ಕ , ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಪಯ್ಯೆ , ಕಾರ್ಯದರ್ಶಿಯಾಗಿ ನಿಝಾಮುದ್ದೀನ್ ಅಜಲ್ದಕ್ಕಿ ಸಹಿತ ವಿರುವ 11 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರು ವಂದಿಸಿದರು.

Related posts

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ, ಪ್ರಾತ್ಯಕ್ಷಿಕೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಿಗೆ ‘ವೃತ್ತಿ-ವ್ಯಕ್ತಿತ್ವ ವಿಕಸನ’ ತರಬೇತಿ ಕಾರ್ಯಾಗಾರ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya
error: Content is protected !!