25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗುರುವಾಯನಕೆರೆ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.
5 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು.

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಡಿ.17 ರಂದು ಸಹಕಾರ ಸಂಘಗಳ ಉಪನಿಬಂಧಕರ ಅಧಿಸೂಚನೆಯಂತೆ ನಡೆಯಲಿದೆ. ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಸಾಲಗಾರ ಸಾಮಾನ್ಯ ಬೆಳ್ತಂಗಡಿ ಕ್ಷೇತ್ರದಿಂದ ಮುಗಳಿ ನಾರಾಯಣ ಭಟ್. ಭುಜಂಗ ಶೆಟ್ಟಿ, ಮೇಲಂತಬೆಟ್ಟು ಸಾಮಾನ್ಯ ಕ್ಷೇತ್ರದಿಂದ ಕಿಶೋರ್ ಕುಮಾರ್ ಕುರ್ತೋಡಿ, ಸತ್ಯಶಂಕರ ಭಟ್, ಕುವೆಟ್ಟು ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಅರುಣ್ ಕುಲಾಲ್, ಹಿಂದುಳಿದ ವರ್ಗ ಬಿ ಮೀಸಲು ಕುವೆಟ್ಟು ಕ್ಷೇತ್ರದಿಂದ ಪುರಂದರ ಶೆಟ್ಟಿ ಪಾಡ್ಯಾರು, ಹಿಂದುಳಿದ ವರ್ಗ ಎ ಮೀಸಲು ಮೇಲಂತಬೆಟ್ಟು ಕ್ಷೇತ್ರದಿಂದ ಮೋಹನ್ ಕೆ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಮೋಹನ್ ನಾಯ್ಕ್, ಮಹಿಳಾ ಮೀಸಲು ಸ್ಥಾನದಿಂದ ಜಯಂತಿ ಆಚಾರ್ಯ, ಸುಂದರಿ ನಾಯ್ಕ ಬೆಳ್ತಂಗಡಿ, ಸಾಲಗಾರರಲ್ಲದ ಕ್ಷೇತ್ರ ಶಶಿರಾಜ್ ಶೆಟ್ಟಿ, ಗುರುವಾಯನಕೆರೆ ನಾಮಪತ್ರ ಸಲ್ಲಿಸಿದರು.

Related posts

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya
error: Content is protected !!