32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

ಬಳಂಜ: ಇತ್ತೀಚೆಗೆ ನಿಧನರಾದ ದೈವದ ಮದ್ಯಸ್ಥ ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ರಾಮಣ್ಣ ಪೂಜಾರಿಯವರ ಸ್ಮರಣಾರ್ಥ ಅವರ ಕುಟುಂಬಿಕರು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಗೆ ರೂ.10 ಸಾವಿರ ದೇಣಿಗೆಯನ್ಮು ನೀಡಿದರು.

ಬಳಂಜ ಬಿಲ್ಲವ ಸಂಘವು ಕಳೆದ ಎರಡು ದಶಕಗಳಿಂದ ಸಂಘದ ಧತ್ತಿನಿಧಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ ನೀಡುತ್ತ ಬರುತ್ತಿದ್ದು ಈ ಯೋಜನೆಗೆ ಹಲವಾರು ಮಂದಿ ದೇಣಿಗೆ ನೀಡಿ ಸಹಕರಿಸಿದ್ದಾರೆ.

ಧತ್ತಿನಿಧಿಯನ್ನು ದಿ.ರಾಮಣ್ಣ ಪೂಜಾರಿಯವರ ಪುತ್ರ ದುಗ್ಗಯ ಪೂಜಾರಿಯವರು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರು, ಸದಸ್ಯರು, ದಿ.ರಾಮಣ್ಣ ಪೂಜಾರಿಯವರ ಕುಟುಂಬಿಕರು ಉಪಸ್ಥಿತರಿದ್ದು ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಿ, ಶ್ರದ್ಧಾಂಜಲಿ ಅರ್ಪಿಸಿದರು.

Related posts

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!